ರಾಜ್ಯ

ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾ: ಪರಮೇಶ್ವರ್‌

ಬೆಳಗಾವಿ : ನಾಗರಿಕರ ಹಿತದೃಷ್ಠಿ ಮತ್ತು ಸುರಕ್ಷತೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಬೆಂಗಳೂರಿನಲ್ಲಿ ನಾಗರಿಕರ ಸುರಕ್ಷತೆಗಾಗಿ ಈಗಾಗಲೇ ೭೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರ ಕಾರ್ಯಾಚರಣೆಗಾಗಿ ಕಮಾಂಡರ್‌ ಸೆಂಟರ್‌ನಲ್ಲಿ ವೀಕ್ಷಣೆ ಮಾಡಲು ಸಿಬ್ಬಂದಿಗಳನ್ನು ಅಳವಡಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರಿಸಿದರು.

ಉನ್ನತ ಗುಣಮಟ್ಟದ ಸಿಸಿ ಕ್ಯಾಮರಾಗಳು ಇದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ವಾಣಿಜ್ಯ ಕಟ್ಟಡ, ಪ್ರದೇಶಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಟ್ಟಡ, ಬಸ್‌ ನಿಲ್ದಾಣಗಳು ಸೇರಿದಂತೆ ಹಲವು ಕಡೆಗಳಲ್ಲಿ ಅಳವಡಿಸಿ ವಿಶೇಷ ನಿಗಾ ಇರಿಸಲಾಗಿದೆ ಎಂದು ಪರಮೇಶ್ವರ್‌ ಹೇಳಿದರು.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

39 mins ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

46 mins ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

50 mins ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

1 hour ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

1 hour ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

1 hour ago