ರಾಜ್ಯ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್ ಮತ್ತು ಟಿ.ವೆಂಕಟೇಶ್ ನಾಯಕ್ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆದಿದೆ. ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದಾರೆ. ಪ್ರಜ್ವಲ್ ೨೦೨೪ ಏಪ್ರಿಲ್ ೨೪ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಪ್ರಜ್ವಲ್ ವಿರುದ್ದ ಏಪ್ರಿಲ್ ೨೮ರಂದು ಪ್ರಕರಣ ದಾಖಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ:-ದಿಲ್ಲಿ ಕಾರು ಸ್ಛೋಟ ಪ್ರಕರಣ : ಉ.ಪ್ರ. ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಎನ್‌ಐಎ ದಾಳಿ

ನನ್ನ ಕಕ್ಷಿದಾರ ದೇಶ ತೊರೆಯುವುದಿಲ್ಲ
ಐಪಿಸಿ ಸೆಕ್ಷನ್ ೨೦೧ರ ಅಡಿ ಸಾಕ್ಷ್ಯ ನಾಶಪಡಿಸಿರುವುದಕ್ಕೆ ಪ್ರೊ. ರವಿವರ್ಮ ಕುಮಾರ್ ಅವರು ಪ್ರಾಸಿಕ್ಯೂಟ್ ಮಾಡಿದ್ದಾರೆಯೇ ಜಿಯೊ ಮ್ಯಾಪ್ ಅನ್ನು ವಿಚಾರಣಾಧೀನ ನ್ಯಾಯಾಧಿಶರು ಪರಿಗಣಿಸಿದ್ದಾರೆ. ಇದನ್ನು ಹೊರತುಪಡಿಸಿ ಇನ್ನೂ ಮೂರು ಪ್ರಕರಣಗಳು ನನ್ನ ಕ್ಷಕಿದಾರ ವಿರುದ್ಧ ಇವೆ. ಯಾವುದೇ ರೀತಿಯಲ್ಲೂ ನನ್ನ ಕಕ್ಷಿದಾರ ದೇಶ ತೊರೆಯುವುದಿಲ್ಲ ಎಂದು ಪ್ರಜ್ವಲ್ ಪರ ವಕೀಲರು ವಾದಿಸಿದರು.

ಬುಧವಾರಕ್ಕೆ ವಿಚಾರಣೆ ಮುಂದೂಡಿಕೆ
ವಾದ-ಪ್ರತಿವಾದ ಆಲಿಸಿದ ನ್ಯಾಯಾಧಿಶರು ವಿಚಾರಣೆಯನ್ನ ಡಿಸೆಂಬರ್ 3ಕ್ಕೆ ಬುಧವಾರಕ್ಕೆ ಮುಂದೂಡಿಕೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

22 mins ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

1 hour ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

3 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

3 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

3 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago