Categories: ರಾಜ್ಯ

ಪ್ರೊ. ಭಗವಾನ್‌ ಮುಖಕ್ಕೆ ಮಸಿ| ವಕೀಲೆ ಮೀರಾ ರಾಘವೇಂದ್ರ ಬಾರ್‌ ಕೌನ್ಸಿಲ್‌ನಿಂದ ಅಮಾನತು

ಬೆಂಗಳೂರು: ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಭಗವಾನ್‌ ಅವರ ಮುಖಕ್ಕೆ ಕೋರ್ಟ್‌ ಅಂಗಳದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರರನ್ನು ಬಾರ್‌ ಕೌನ್ಸಿಲ್‌ನಿಂದ ಅಮಾನತು ಮಾಡಲಾಗಿದೆ.

ಶ್ರೀರಾಮ ದೇವರನ್ನು ನಿಂದಿಸಿ ಬರೆದಿದ್ದಾರೆ ಎಂದು ಆರೋಪಿಸಿ ೨ನೇ ಎಸಿ ಎಂಎಂ ನ್ಯಾಯಾಲದಲ್ಲಿ ವಕೀಲೆ ಮೀರಾ ರಾಘವೇಂದ್ರ ಪ್ರಕರಣ ದಾಖಲಿಸಿದ್ದರು. ಸದರಿ ಪ್ರಕರಣದಲ್ಲಿ ಫೆ.4 2021 ರಂದು ನ್ಯಾಯಾಲದಲ್ಲಿ ಹಾಜರಾಗಿ ಜಾಮೀನು ಪಡೆದು ಹೊರಬರುತ್ತಿದ್ದ ಭಗವಾನ್‌ ಅವರ ಮುಖಕ್ಕೆ ಮಸಿ ಬಳಿದು ಭಗವಾನ್‌ ಅವರನ್ನೂ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನು ಹಾಕಿದ್ದರು.

ಇದು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಭಗವಾನ್‌ ಅವರು ಕರ್ನಾಟಕ ಬಾರ್‌ ಕೌನ್ಸಿಲ್‌ ನಲ್ಲಿ ಅವರ ವಿರುದ್ಧ ದೂರು ದಾಖಲಿಸಿದರು.

ದೂರಿಗೆ ಸಂಬಂಧಿಸಿದಂತೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ರಿಜಿಸ್ಟರ್ಡ್‌ ಕಳುಹಿಸಿದ್ದರು ಇದಕ್ಕೆ ಸ್ಪಂದಿಸಿರಲಿಲ್ಲ. ಇವರ ಅನುಪಸ್ಥಿತಿಯಲ್ಲಿ ವಿಚಾರಣೆ ನಡೆಸಿದ ಬಾರ್‌ ಕೌನ್ಸಿಲ್‌ ವೃತ್ತಿಪರರಾಗಿ ಕೆಲಸ ಮಾಡುವ ಮೀರಾ ಅವರೇ ದೂರಿನ ಬಗ್ಗೆ ವಿಚಾರಿಸದೇ ಕೋರ್ಟ್‌ಗೆ ಹಾಜರಾಗದೇ ಅವರು ಬಾರ್‌ ಕೌನ್ಸಿಲ್‌ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ.

ಹಾಗೇಯೇ ವಕೀಲರ ಸಮವಸ್ತ್ರದಲ್ಲಿದ್ದುಕೊಂಡೇ ಈ ರೀತಿ ನಡೆದುಕೊಂಡಿರುವುದು ಅವರ ದುರ್ನಡತೆಯನ್ನು ತೋರಿಸುತ್ತದೆ. ವೃತ್ತಿಯ ಶಿಷ್ಟಾಚಾರಕ್ಕೆ ಅಪಮಾನಮಾಡಿದ್ದು, ಅವರಿಗೆ ಮೂರು ತಿಂಗಳ ಕಾಲ ಕರ್ನಾಟಕ ರಾಜ್ಯ ಹಾಗೂ ದೇಶದ ಯಾವುದೇ ನ್ಯಾಯಾಲಯಗಳಲ್ಲಿ ವಕೀಲಿಕೆ ಮಾಡಬಾರದು ಎಂದು ಕರ್ನಾಟಕದ ಬಾರ್‌ ಕೌನ್ಸಿಲ್‌ ನ.20 2024ರಂದು ಆದೇಶ ನೀಡಿದೆ.

ಬಾರ್‌ ಕೌನ್ಸಿಲ್‌ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಭಗವಾನ್‌, ನನಗೂ ಹಾಗೂ ಮೀರಾ ರಘವೇಂದ್ರ ಅವರಿಗೂ ವೈಯುಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ನಾನು ಬರೆದಿರುವ ಪುಸ್ತಕದಿಂದ ಅವರು ಕೋಪಗೊಂಡು ನನ್ನ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು ಆದರೆ ಅವರೇ ಹಾಜರಾಗದ ಕಾರಣ ಅವರ ಸಾಮಾಜಿಕ ಜವಾಬ್ದಾರಿ ಏನು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಅಷ್ಟೇ. ನಾನು ವಾಲ್ಮೀಕಿ ರಾಮಾಯಣದಲ್ಲಿರುವ ಅಂಶಗಳನ್ನು ಆಧರಿಸಿ ಪುಸ್ತಕವನ್ನು ಬರೆದಿದ್ದೇನೆ ಅವರು ಓದದೇ ಬಾಯಿಗೆ ಬಂದಂತೆ ಮಾತನಾಡಿದರೆ ನಮ್ಮ ತಪ್ಪೇ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

30 mins ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

2 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

3 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

3 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

8 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

8 hours ago