Categories: ರಾಜ್ಯ

ಪ್ರೊ. ಭಗವಾನ್‌ ಮುಖಕ್ಕೆ ಮಸಿ| ವಕೀಲೆ ಮೀರಾ ರಾಘವೇಂದ್ರ ಬಾರ್‌ ಕೌನ್ಸಿಲ್‌ನಿಂದ ಅಮಾನತು

ಬೆಂಗಳೂರು: ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್.ಭಗವಾನ್‌ ಅವರ ಮುಖಕ್ಕೆ ಕೋರ್ಟ್‌ ಅಂಗಳದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರರನ್ನು ಬಾರ್‌ ಕೌನ್ಸಿಲ್‌ನಿಂದ ಅಮಾನತು ಮಾಡಲಾಗಿದೆ.

ಶ್ರೀರಾಮ ದೇವರನ್ನು ನಿಂದಿಸಿ ಬರೆದಿದ್ದಾರೆ ಎಂದು ಆರೋಪಿಸಿ ೨ನೇ ಎಸಿ ಎಂಎಂ ನ್ಯಾಯಾಲದಲ್ಲಿ ವಕೀಲೆ ಮೀರಾ ರಾಘವೇಂದ್ರ ಪ್ರಕರಣ ದಾಖಲಿಸಿದ್ದರು. ಸದರಿ ಪ್ರಕರಣದಲ್ಲಿ ಫೆ.4 2021 ರಂದು ನ್ಯಾಯಾಲದಲ್ಲಿ ಹಾಜರಾಗಿ ಜಾಮೀನು ಪಡೆದು ಹೊರಬರುತ್ತಿದ್ದ ಭಗವಾನ್‌ ಅವರ ಮುಖಕ್ಕೆ ಮಸಿ ಬಳಿದು ಭಗವಾನ್‌ ಅವರನ್ನೂ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನು ಹಾಕಿದ್ದರು.

ಇದು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಭಗವಾನ್‌ ಅವರು ಕರ್ನಾಟಕ ಬಾರ್‌ ಕೌನ್ಸಿಲ್‌ ನಲ್ಲಿ ಅವರ ವಿರುದ್ಧ ದೂರು ದಾಖಲಿಸಿದರು.

ದೂರಿಗೆ ಸಂಬಂಧಿಸಿದಂತೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ರಿಜಿಸ್ಟರ್ಡ್‌ ಕಳುಹಿಸಿದ್ದರು ಇದಕ್ಕೆ ಸ್ಪಂದಿಸಿರಲಿಲ್ಲ. ಇವರ ಅನುಪಸ್ಥಿತಿಯಲ್ಲಿ ವಿಚಾರಣೆ ನಡೆಸಿದ ಬಾರ್‌ ಕೌನ್ಸಿಲ್‌ ವೃತ್ತಿಪರರಾಗಿ ಕೆಲಸ ಮಾಡುವ ಮೀರಾ ಅವರೇ ದೂರಿನ ಬಗ್ಗೆ ವಿಚಾರಿಸದೇ ಕೋರ್ಟ್‌ಗೆ ಹಾಜರಾಗದೇ ಅವರು ಬಾರ್‌ ಕೌನ್ಸಿಲ್‌ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ.

ಹಾಗೇಯೇ ವಕೀಲರ ಸಮವಸ್ತ್ರದಲ್ಲಿದ್ದುಕೊಂಡೇ ಈ ರೀತಿ ನಡೆದುಕೊಂಡಿರುವುದು ಅವರ ದುರ್ನಡತೆಯನ್ನು ತೋರಿಸುತ್ತದೆ. ವೃತ್ತಿಯ ಶಿಷ್ಟಾಚಾರಕ್ಕೆ ಅಪಮಾನಮಾಡಿದ್ದು, ಅವರಿಗೆ ಮೂರು ತಿಂಗಳ ಕಾಲ ಕರ್ನಾಟಕ ರಾಜ್ಯ ಹಾಗೂ ದೇಶದ ಯಾವುದೇ ನ್ಯಾಯಾಲಯಗಳಲ್ಲಿ ವಕೀಲಿಕೆ ಮಾಡಬಾರದು ಎಂದು ಕರ್ನಾಟಕದ ಬಾರ್‌ ಕೌನ್ಸಿಲ್‌ ನ.20 2024ರಂದು ಆದೇಶ ನೀಡಿದೆ.

ಬಾರ್‌ ಕೌನ್ಸಿಲ್‌ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಭಗವಾನ್‌, ನನಗೂ ಹಾಗೂ ಮೀರಾ ರಘವೇಂದ್ರ ಅವರಿಗೂ ವೈಯುಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ನಾನು ಬರೆದಿರುವ ಪುಸ್ತಕದಿಂದ ಅವರು ಕೋಪಗೊಂಡು ನನ್ನ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು ಆದರೆ ಅವರೇ ಹಾಜರಾಗದ ಕಾರಣ ಅವರ ಸಾಮಾಜಿಕ ಜವಾಬ್ದಾರಿ ಏನು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಅಷ್ಟೇ. ನಾನು ವಾಲ್ಮೀಕಿ ರಾಮಾಯಣದಲ್ಲಿರುವ ಅಂಶಗಳನ್ನು ಆಧರಿಸಿ ಪುಸ್ತಕವನ್ನು ಬರೆದಿದ್ದೇನೆ ಅವರು ಓದದೇ ಬಾಯಿಗೆ ಬಂದಂತೆ ಮಾತನಾಡಿದರೆ ನಮ್ಮ ತಪ್ಪೇ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago