ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್‌ ಹಂದಿಜ್ವರ ದೃಢ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್‌ ಹಂದಿಜ್ವರ ದೃಢವಾಗಿದೆ.

ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ.

ಆಗಸ್ಟ್.‌14ರಿಂದಲೇ ಹಂದಿಗಳು ಸಾವನ್ನಪ್ಪುತ್ತಿದ್ದು, ಸತ್ತ ಹಂದಿಗಳನ್ನು ಸಮೀಪದ ಹೆಬ್ಬರಿ ಗ್ರಾಮದ ಕೆರೆಗೆ ಬಿಸಾಡಲಾಗಿದೆ. ಪರಿಣಾಮ ಹಂದಿಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಇದರಿಂದ ಇಡೀ ಕೆರೆಯ ನೀರು ಮಲಿನವಾಗಿದೆ.

ಪಶುಪಾಲನಾ ಇಲಾಖೆ ಅಧಿಕಾರಿಗಳು ಸತ್ತ ಹಂದಿಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಹಂದಿ ಜ್ವರ ದೃಢಪಟ್ಟಿದೆ. ಘಟನೆ ಬಳಿಕ ಫಾರಂನಲ್ಲಿದ್ದ 57 ಹಂದಿಗಳನ್ನು ಸಾಮೂಹಿಕ ಹತ್ಯೆ ನಡೆಸಲಾಗಿದೆ. ಮತ್ತೊಂದೆಡೆ ತಾಲ್ಲೂಕು ಆಡಳಿತ ಕೆರೆಯಲ್ಲಿ ಬಿಸಾಡಿರುವ ಹಂದಿಯ ಮೃತದೇಹದ ಕಳೇಬರಗಳನ್ನು ಜೆಸಿಬಿ ಮೂಲಕ ತೆಗೆದು ಮಣ್ಣಿನಲ್ಲಿ ಮುಚ್ಚಿ ಹಾಕುತ್ತಿದೆ.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago