pig
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ದೃಢವಾಗಿದೆ.
ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ.
ಆಗಸ್ಟ್.14ರಿಂದಲೇ ಹಂದಿಗಳು ಸಾವನ್ನಪ್ಪುತ್ತಿದ್ದು, ಸತ್ತ ಹಂದಿಗಳನ್ನು ಸಮೀಪದ ಹೆಬ್ಬರಿ ಗ್ರಾಮದ ಕೆರೆಗೆ ಬಿಸಾಡಲಾಗಿದೆ. ಪರಿಣಾಮ ಹಂದಿಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಇದರಿಂದ ಇಡೀ ಕೆರೆಯ ನೀರು ಮಲಿನವಾಗಿದೆ.
ಪಶುಪಾಲನಾ ಇಲಾಖೆ ಅಧಿಕಾರಿಗಳು ಸತ್ತ ಹಂದಿಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಹಂದಿ ಜ್ವರ ದೃಢಪಟ್ಟಿದೆ. ಘಟನೆ ಬಳಿಕ ಫಾರಂನಲ್ಲಿದ್ದ 57 ಹಂದಿಗಳನ್ನು ಸಾಮೂಹಿಕ ಹತ್ಯೆ ನಡೆಸಲಾಗಿದೆ. ಮತ್ತೊಂದೆಡೆ ತಾಲ್ಲೂಕು ಆಡಳಿತ ಕೆರೆಯಲ್ಲಿ ಬಿಸಾಡಿರುವ ಹಂದಿಯ ಮೃತದೇಹದ ಕಳೇಬರಗಳನ್ನು ಜೆಸಿಬಿ ಮೂಲಕ ತೆಗೆದು ಮಣ್ಣಿನಲ್ಲಿ ಮುಚ್ಚಿ ಹಾಕುತ್ತಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…