ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಕರ್ನಾಟಕಕ್ಕೂ ಭಾರೀ ಆತಂಕ ಮನೆಮಾಡಿದೆ.
ಆಫ್ರಿಕನ್ ಹಂದಿಜ್ವರ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ಹಂದಿ ಖಾಯಿಲೆಯಾಗಿದ್ದು, ಇದು ಕಾಡು ಹಂದಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ತ್ರಿಶೂರ್ ಜಿಲ್ಲೆಯ ಮಡಕ್ಕತಾರಾ ಪಂಚಾಯತ್ನ ಖಾಸಗಿ ಜಮೀನಿನಲ್ಲಿ ೩೧೦ ಹಂದಿಗಳನ್ನು ಕೊಲ್ಲಲು ಆದೇಶಿಸಲಾಗಿದೆ.
ಕೇರಳದಲ್ಲಿ ಹಂದಿ ರೋಗದ ಹಾವಳಿ ಹೆಚ್ಚಾಗಿದ್ದು, ಇದು ಹಂದಿಗಳಿಂದ ಜನರಿಗೆ ಹರಡುವುದಿಲ್ಲ. ಆದರೆ ಹಂದಿಗಳಿಗೆ ಬೇಗ ಹರಡುತ್ತದೆ. ಒಂದು ಹಂದಿಯಿಂದ ಮತ್ತೊಂದು ಹಂದಿಗೆ ಬೇಗ ಸೋಂಕು ಹರಡುವ ಕಾರಣ ೩೧೦ ಹಂದಿಗಳನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.
ಹಾನಿಗೊಳಗಾದ ಜಮೀನಿನ ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ೧೦ ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಕಣ್ಗಾವಲು ಪ್ರದೇಶವೆಂದು ಘೋಷಿಸಲಾಗಿದೆ.
ತ್ರಿಶೂರ್ ಅಥವಾ ಇತರ ಪ್ರದೇಶಗಳಿಂದ ಹಂದಿಗಳನ್ನು ಅಕ್ರಮವಾಗಿ ಸಾಗಿಸುವುದನ್ನು ತಡೆಯಲು ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…