ರಾಜ್ಯ

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ; ಕರ್ನಾಟಕಕ್ಕೂ ಭಾರೀ ಆತಂಕ

ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ಕರ್ನಾಟಕಕ್ಕೂ ಭಾರೀ ಆತಂಕ ಮನೆಮಾಡಿದೆ.

ಆಫ್ರಿಕನ್‌ ಹಂದಿಜ್ವರ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ಹಂದಿ ಖಾಯಿಲೆಯಾಗಿದ್ದು, ಇದು ಕಾಡು ಹಂದಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ತ್ರಿಶೂರ್‌ ಜಿಲ್ಲೆಯ ಮಡಕ್ಕತಾರಾ ಪಂಚಾಯತ್‌ನ ಖಾಸಗಿ ಜಮೀನಿನಲ್ಲಿ ೩೧೦ ಹಂದಿಗಳನ್ನು ಕೊಲ್ಲಲು ಆದೇಶಿಸಲಾಗಿದೆ.

ಕೇರಳದಲ್ಲಿ ಹಂದಿ ರೋಗದ ಹಾವಳಿ ಹೆಚ್ಚಾಗಿದ್ದು, ಇದು ಹಂದಿಗಳಿಂದ ಜನರಿಗೆ ಹರಡುವುದಿಲ್ಲ. ಆದರೆ ಹಂದಿಗಳಿಗೆ ಬೇಗ ಹರಡುತ್ತದೆ. ಒಂದು ಹಂದಿಯಿಂದ ಮತ್ತೊಂದು ಹಂದಿಗೆ ಬೇಗ ಸೋಂಕು ಹರಡುವ ಕಾರಣ ೩೧೦ ಹಂದಿಗಳನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.

ಹಾನಿಗೊಳಗಾದ ಜಮೀನಿನ ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ೧೦ ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಕಣ್ಗಾವಲು ಪ್ರದೇಶವೆಂದು ಘೋಷಿಸಲಾಗಿದೆ.

ತ್ರಿಶೂರ್‌ ಅಥವಾ ಇತರ ಪ್ರದೇಶಗಳಿಂದ ಹಂದಿಗಳನ್ನು ಅಕ್ರಮವಾಗಿ ಸಾಗಿಸುವುದನ್ನು ತಡೆಯಲು ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

2 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

2 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

3 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

3 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

3 hours ago