ರಾಜ್ಯ

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆ!

ಹುಬ್ಬಳ್ಳಿ: ನನ್ನ ಮೇಲೆ ಯಾವುದೇ ಕೇಸ್‌ ಇರಲಿಲ್ಲ. ಎಲ್ಲಾ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಂಡ ಬಳಿಕವೇ ಬೆಳಗಾವಿಗೆ ಹೋಗಿದ್ದೆ. ಬಂಧನಕ್ಕೀಡಾಗಿದ್ದ ದಿನ ನಾನು ಬೆಳಿಗ್ಗೆ ಬೆಳಗಾವಿಯಿಂದ ಬಂದಿದ್ದೆ. ನಿಮ್ಮ ಜೊತೆ ಮಾತನಾಡಬೇಕು ಎಂದು ಹೇಳಿ, ಹಾಗೆ ಕರೆದುಕೊಂಡು ಹೋದವರು ಸೀದಾ ಜೈಲ್‌ಗೆ ಹಾಕಿದ್ರು. ಇದು ಇಂದು ಹುಬ್ಬಳ್ಳಿ ಕಾರಾಗೃಹದಿಂದ ಬಿಡುಗಡೆಗೊಂಡ ಕರಸೇವಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆಯಾಗಿದೆ.

ಬಿಡುಗಡೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಮೇಲೆ ಯಾವುದೇ ಪ್ರಕರಣ ಬಾಕಿ ಇರಲಿಲ್ಲ, ನನ್ನ ಮೇಲೆ ಹಿಂದೆ ಇದ್ದ ಎಲ್ಲಾ ಪ್ರಕರಣಗಳು ಇತ್ಯರ್ಥವಾಗಿದ್ದವು. ಎಲ್ಲಾ ಪ್ರಕರಣಗಳನ್ನು ಮರೆತು ಜೀವನ ನಡೆಸುತ್ತಿದ್ದ ನನ್ನನ್ನು ಸುಮ್ಮನೇ ಬಂಧಿಸಲಾಗಿತ್ತು ಎಂದು ಹೇಳಿದ್ದಾರೆ.

ನನ್ನನ್ನು ಬಂಧಿಸಿದ ದಿನ ನಾನು ಬೆಳಗಾವಿಯಿಂದ ಹುಬ್ಬಳ್ಳಿಗೆ ಬಂದ ಸಮಯದಲ್ಲಿ ಬಸ್‌ ನಿಲ್ದಾಣದಲ್ಲಿಯೇ ಪೊಲೀಸರು ನನ್ನ ತಡೆದು, ನಿಮ್ಮ ಜೊತೆಯಲ್ಲಿ ಮಾತನಾಡವುದಿದೆ ಎಂದು ಕರೆದರು. ನಂತರ ಬರುವುದಾಗಿ ತಿಳಿಸಿದರು ಸಹಾ ನಾವೇ ನಿಮ್ಮನ್ನು ಮನೆಗೆ ಬಿಡುವುದಾಗಿ ಹೇಳಿ ಜೀಪ್‌ ಹತ್ತಿಸಿಕೊಂಡು ಶಹರ ಪೊಲೀಸ್‌ ಠಾಣೆಗೆ ಕರೆದೊಯ್ದರು.

ನಾನು ಇಲ್ಲಿಗೆ ಏಕೆ ಕರೆ ತಂದಿದ್ದೀರಿ ಎಂದು ಕೇಳಿದ್ದಕ್ಕೆ, ಒಳಗೆ ನಡೆಯಿರಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ಇದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಕರೆದೊಯ್ದು ನನ್ನನ್ನು ಬಂಧಿಸಿದರು ಎಂದು ಶ್ರೀಕಾಂತ್‌ ಪೂಜಾರಿ ಸವಿವರವಾಗಿ ಮಾಹಿತಿ ನೀಡಿದರು.

ಇನ್ನೂ ಜೈಲಿನಲ್ಲಿದ್ದಾಗ ಪೂಜಾರಿ ಪರ ವಿವಿಧ ಸಂಘ ಸಂಸ್ಥೆಗಳು ಹೋರಾಟ ಮಾಡಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಈ ಬಗ್ಗೆ ಸ್ವಲ್ಪ-ಸ್ವಲ್ಪ ಮಾಹಿತಿಯಿದೆ. ನನ್ನ ಪರವಾಗಿ ಧನಿಯೆತ್ತಿದ ಬಿಜೆಪಿ ನಾಯಕರು, ಕಾರ್ಯಕ್ರತರು ಮತ್ತು ಹಿಂದೂಪರ ಸಂಘಟನೆಗಳಿಗೆ ಧನ್ಯವಾಗಳನ್ನು ಅರ್ಪಿಸಿದರು.

ಇನ್ನು ಇದೇ ವೇಳೆ ಜನವರಿ ೨೨ ರಿಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆಗೆ ಖಚಿತವಾಗಿಯೂ ಹೋಗುತ್ತೇನೆ, ಯಾವುದೇ ಕಾರಣಕ್ಕೂ ಈ ಕಾರ್ಯಕ್ರಮಕ್ಕೆ ತಪ್ಪಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

33 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago