ರಾಜ್ಯ

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆ!

ಹುಬ್ಬಳ್ಳಿ: ನನ್ನ ಮೇಲೆ ಯಾವುದೇ ಕೇಸ್‌ ಇರಲಿಲ್ಲ. ಎಲ್ಲಾ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಂಡ ಬಳಿಕವೇ ಬೆಳಗಾವಿಗೆ ಹೋಗಿದ್ದೆ. ಬಂಧನಕ್ಕೀಡಾಗಿದ್ದ ದಿನ ನಾನು ಬೆಳಿಗ್ಗೆ ಬೆಳಗಾವಿಯಿಂದ ಬಂದಿದ್ದೆ. ನಿಮ್ಮ ಜೊತೆ ಮಾತನಾಡಬೇಕು ಎಂದು ಹೇಳಿ, ಹಾಗೆ ಕರೆದುಕೊಂಡು ಹೋದವರು ಸೀದಾ ಜೈಲ್‌ಗೆ ಹಾಕಿದ್ರು. ಇದು ಇಂದು ಹುಬ್ಬಳ್ಳಿ ಕಾರಾಗೃಹದಿಂದ ಬಿಡುಗಡೆಗೊಂಡ ಕರಸೇವಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆಯಾಗಿದೆ.

ಬಿಡುಗಡೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಮೇಲೆ ಯಾವುದೇ ಪ್ರಕರಣ ಬಾಕಿ ಇರಲಿಲ್ಲ, ನನ್ನ ಮೇಲೆ ಹಿಂದೆ ಇದ್ದ ಎಲ್ಲಾ ಪ್ರಕರಣಗಳು ಇತ್ಯರ್ಥವಾಗಿದ್ದವು. ಎಲ್ಲಾ ಪ್ರಕರಣಗಳನ್ನು ಮರೆತು ಜೀವನ ನಡೆಸುತ್ತಿದ್ದ ನನ್ನನ್ನು ಸುಮ್ಮನೇ ಬಂಧಿಸಲಾಗಿತ್ತು ಎಂದು ಹೇಳಿದ್ದಾರೆ.

ನನ್ನನ್ನು ಬಂಧಿಸಿದ ದಿನ ನಾನು ಬೆಳಗಾವಿಯಿಂದ ಹುಬ್ಬಳ್ಳಿಗೆ ಬಂದ ಸಮಯದಲ್ಲಿ ಬಸ್‌ ನಿಲ್ದಾಣದಲ್ಲಿಯೇ ಪೊಲೀಸರು ನನ್ನ ತಡೆದು, ನಿಮ್ಮ ಜೊತೆಯಲ್ಲಿ ಮಾತನಾಡವುದಿದೆ ಎಂದು ಕರೆದರು. ನಂತರ ಬರುವುದಾಗಿ ತಿಳಿಸಿದರು ಸಹಾ ನಾವೇ ನಿಮ್ಮನ್ನು ಮನೆಗೆ ಬಿಡುವುದಾಗಿ ಹೇಳಿ ಜೀಪ್‌ ಹತ್ತಿಸಿಕೊಂಡು ಶಹರ ಪೊಲೀಸ್‌ ಠಾಣೆಗೆ ಕರೆದೊಯ್ದರು.

ನಾನು ಇಲ್ಲಿಗೆ ಏಕೆ ಕರೆ ತಂದಿದ್ದೀರಿ ಎಂದು ಕೇಳಿದ್ದಕ್ಕೆ, ಒಳಗೆ ನಡೆಯಿರಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ಇದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಕರೆದೊಯ್ದು ನನ್ನನ್ನು ಬಂಧಿಸಿದರು ಎಂದು ಶ್ರೀಕಾಂತ್‌ ಪೂಜಾರಿ ಸವಿವರವಾಗಿ ಮಾಹಿತಿ ನೀಡಿದರು.

ಇನ್ನೂ ಜೈಲಿನಲ್ಲಿದ್ದಾಗ ಪೂಜಾರಿ ಪರ ವಿವಿಧ ಸಂಘ ಸಂಸ್ಥೆಗಳು ಹೋರಾಟ ಮಾಡಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಈ ಬಗ್ಗೆ ಸ್ವಲ್ಪ-ಸ್ವಲ್ಪ ಮಾಹಿತಿಯಿದೆ. ನನ್ನ ಪರವಾಗಿ ಧನಿಯೆತ್ತಿದ ಬಿಜೆಪಿ ನಾಯಕರು, ಕಾರ್ಯಕ್ರತರು ಮತ್ತು ಹಿಂದೂಪರ ಸಂಘಟನೆಗಳಿಗೆ ಧನ್ಯವಾಗಳನ್ನು ಅರ್ಪಿಸಿದರು.

ಇನ್ನು ಇದೇ ವೇಳೆ ಜನವರಿ ೨೨ ರಿಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆಗೆ ಖಚಿತವಾಗಿಯೂ ಹೋಗುತ್ತೇನೆ, ಯಾವುದೇ ಕಾರಣಕ್ಕೂ ಈ ಕಾರ್ಯಕ್ರಮಕ್ಕೆ ತಪ್ಪಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago