ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ ೨೦೩೩ರವರೆಗೂ ೧೫೦ ಕಿ.ಮೀ ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.
ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸ್ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…