ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ ೨೦೩೩ರವರೆಗೂ ೧೫೦ ಕಿ.ಮೀ ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.
ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸ್ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…