ರಾಜ್ಯ

ಜಿಯೋ ಬಳಿಕ ಏರ್‌ಟೆಲ್‌ ಗ್ರಾಹಕರ ಜೇಬಿಗೂ ಕತ್ತರಿ; ಶೇ 21% ದರ ಏರಿಕೆ

ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್‌ಟೆಲ್‌ ಕೂಡ ತನ್ನ ವಿವಿಧ ಪ್ಲ್ಯಾನ್‌ಗಳ ರಿಚಾರ್ಜ್‌ ದರ ಹೆಚ್ಚಿಸಿದೆ.

ರಿಲಾಯನ್ಸ್‌ ಜಿಯೋದ ದರ ಶೇ 12ರಿಂದ 20ರವರೆಗೂ ಏರಿಕೆಯಾದರೆ, ಇಂಟರ್‍ನೆಟ್ ಸೇವಾದಾತ ಕಂಪನಿ ಭಾರ್ತಿ ಏರ್‍ಟೆಲ್, ತನ್ನ ಡೇಟಾ ದರಗಳನ್ನು ಶೇ.10-21ರಷ್ಟು ಹೆಚ್ಚಿಸಿದೆ. ಈ ಎಲ್ಲಾ ಪರಿಷ್ಕೃತ ದರಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಭಾರ್ತಿ ಏರ್‌ಟೆಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ರಿಲಯನ್ಸ್ ಜಿಯೋ ತನ್ನ ಮೊಬೈಲ್ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್‍ಟೆಲ್ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು.

ಗ್ರಾಹಕರ ಮೇಲಿನ ಹೆಚ್ಚಿನ ಹೊರೆಗಳನ್ನು ನಿವಾರಿಸುವ ಸಲುವಾಗಿ, ಎಂಟ್ರಿ ಲೆವೆಲ್ ಪ್ಲಾನ್‍ಗಳಲ್ಲಿ ಅತ್ಯಂತ ಸಾಧಾರಣ ಬೆಲೆ ಏರಿಕೆ (ದಿನಕ್ಕೆ 70 ಪೈಸೆಗಿಂತ ಕಡಿಮೆ) ಮಾಡಲಾಗಿದೆ ಎಂದು ಭಾರ್ತಿ ಏರ್ಟೆಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿ ಟೆಲಿಕಾಂ ಕಂಪನಿಗಳು ಆರ್ಥಿಕವಾಗಿ ಆರೋಗ್ಯಕರ ವ್ಯವಹಾರ ಮಾಡಬೇಕು ಎಂದಿದ್ದರೆ ಮೊಬೈಲ್ ಸರಾಸರಿ ಆದಾಯ (ಎಆರ್‍ಪಿಯು) 300 ರೂ.ಗಿಂತ ಹೆಚ್ಚಾಗಿರಬೇಕು ಎಂದು ಭಾರ್ತಿ ಏರ್ಟೆಲ್ ಹೇಳಿದೆ. ಈ ಮಟ್ಟದ ಎಆರ್‍ಪಿಯು ನೆಟ್‍ವರ್ಕ್ ತಂತ್ರಜ್ಞಾನ ಮತ್ತು ಸ್ಪೆಕ್ಟ್ರಮ್‍ನಲ್ಲಿ ಅಗತ್ಯವಿರುವ ಗಣನೀಯ ಹೂಡಿಕೆಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಬಂಡವಾಳದ ಮೇಲೆ ಸಾಧಾರಣ ಆದಾಯವನ್ನು ನೀಡುತ್ತದೆ ಎಂದು ಅದು ಹೇಳಿದೆ.

ಭಾರ್ತಿ ಏರ್ಟೆಲ್ ಷೇರುಗಳು ಬಿಎಸ್‍ಇಯಲ್ಲಿ ಸುಮಾರು 2% ಏರಿಕೆಯಾಗಿ 1496.80 ರೂ.ಗೆ ತಲುಪಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಭಾರ್ತಿ ಏರ್ಟೆಲ್ ಎರಡೂ ಜೂನ್ 28ರ ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago