ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ ಎಲ್ಲಾ ರಿಚಾರ್ಚ್ ಪ್ಲ್ಯಾನ್ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್ಟೆಲ್ ಕೂಡ ತನ್ನ ವಿವಿಧ ಪ್ಲ್ಯಾನ್ಗಳ ರಿಚಾರ್ಜ್ ದರ ಹೆಚ್ಚಿಸಿದೆ.
ರಿಲಾಯನ್ಸ್ ಜಿಯೋದ ದರ ಶೇ 12ರಿಂದ 20ರವರೆಗೂ ಏರಿಕೆಯಾದರೆ, ಇಂಟರ್ನೆಟ್ ಸೇವಾದಾತ ಕಂಪನಿ ಭಾರ್ತಿ ಏರ್ಟೆಲ್, ತನ್ನ ಡೇಟಾ ದರಗಳನ್ನು ಶೇ.10-21ರಷ್ಟು ಹೆಚ್ಚಿಸಿದೆ. ಈ ಎಲ್ಲಾ ಪರಿಷ್ಕೃತ ದರಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಭಾರ್ತಿ ಏರ್ಟೆಲ್ ಪ್ರಕಟಣೆಯಲ್ಲಿ ತಿಳಿಸಿದೆ.
ರಿಲಯನ್ಸ್ ಜಿಯೋ ತನ್ನ ಮೊಬೈಲ್ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು.
ಗ್ರಾಹಕರ ಮೇಲಿನ ಹೆಚ್ಚಿನ ಹೊರೆಗಳನ್ನು ನಿವಾರಿಸುವ ಸಲುವಾಗಿ, ಎಂಟ್ರಿ ಲೆವೆಲ್ ಪ್ಲಾನ್ಗಳಲ್ಲಿ ಅತ್ಯಂತ ಸಾಧಾರಣ ಬೆಲೆ ಏರಿಕೆ (ದಿನಕ್ಕೆ 70 ಪೈಸೆಗಿಂತ ಕಡಿಮೆ) ಮಾಡಲಾಗಿದೆ ಎಂದು ಭಾರ್ತಿ ಏರ್ಟೆಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿ ಟೆಲಿಕಾಂ ಕಂಪನಿಗಳು ಆರ್ಥಿಕವಾಗಿ ಆರೋಗ್ಯಕರ ವ್ಯವಹಾರ ಮಾಡಬೇಕು ಎಂದಿದ್ದರೆ ಮೊಬೈಲ್ ಸರಾಸರಿ ಆದಾಯ (ಎಆರ್ಪಿಯು) 300 ರೂ.ಗಿಂತ ಹೆಚ್ಚಾಗಿರಬೇಕು ಎಂದು ಭಾರ್ತಿ ಏರ್ಟೆಲ್ ಹೇಳಿದೆ. ಈ ಮಟ್ಟದ ಎಆರ್ಪಿಯು ನೆಟ್ವರ್ಕ್ ತಂತ್ರಜ್ಞಾನ ಮತ್ತು ಸ್ಪೆಕ್ಟ್ರಮ್ನಲ್ಲಿ ಅಗತ್ಯವಿರುವ ಗಣನೀಯ ಹೂಡಿಕೆಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಬಂಡವಾಳದ ಮೇಲೆ ಸಾಧಾರಣ ಆದಾಯವನ್ನು ನೀಡುತ್ತದೆ ಎಂದು ಅದು ಹೇಳಿದೆ.
ಭಾರ್ತಿ ಏರ್ಟೆಲ್ ಷೇರುಗಳು ಬಿಎಸ್ಇಯಲ್ಲಿ ಸುಮಾರು 2% ಏರಿಕೆಯಾಗಿ 1496.80 ರೂ.ಗೆ ತಲುಪಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಭಾರ್ತಿ ಏರ್ಟೆಲ್ ಎರಡೂ ಜೂನ್ 28ರ ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದವು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…