ರಾಜ್ಯ

ಜಿಯೋ ಬಳಿಕ ಏರ್‌ಟೆಲ್‌ ಗ್ರಾಹಕರ ಜೇಬಿಗೂ ಕತ್ತರಿ; ಶೇ 21% ದರ ಏರಿಕೆ

ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಯಾದ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ನಿನ್ನೆ(ಜೂ.27)ಹೆಚ್ಚಿಸಿದ ಬೆನ್ನಲ್ಲೇ, ಇಂದು(ಜೂ.29) ಭಾರ್ತಿ ಏರ್‌ಟೆಲ್‌ ಕೂಡ ತನ್ನ ವಿವಿಧ ಪ್ಲ್ಯಾನ್‌ಗಳ ರಿಚಾರ್ಜ್‌ ದರ ಹೆಚ್ಚಿಸಿದೆ.

ರಿಲಾಯನ್ಸ್‌ ಜಿಯೋದ ದರ ಶೇ 12ರಿಂದ 20ರವರೆಗೂ ಏರಿಕೆಯಾದರೆ, ಇಂಟರ್‍ನೆಟ್ ಸೇವಾದಾತ ಕಂಪನಿ ಭಾರ್ತಿ ಏರ್‍ಟೆಲ್, ತನ್ನ ಡೇಟಾ ದರಗಳನ್ನು ಶೇ.10-21ರಷ್ಟು ಹೆಚ್ಚಿಸಿದೆ. ಈ ಎಲ್ಲಾ ಪರಿಷ್ಕೃತ ದರಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಭಾರ್ತಿ ಏರ್‌ಟೆಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ರಿಲಯನ್ಸ್ ಜಿಯೋ ತನ್ನ ಮೊಬೈಲ್ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್‍ಟೆಲ್ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು.

ಗ್ರಾಹಕರ ಮೇಲಿನ ಹೆಚ್ಚಿನ ಹೊರೆಗಳನ್ನು ನಿವಾರಿಸುವ ಸಲುವಾಗಿ, ಎಂಟ್ರಿ ಲೆವೆಲ್ ಪ್ಲಾನ್‍ಗಳಲ್ಲಿ ಅತ್ಯಂತ ಸಾಧಾರಣ ಬೆಲೆ ಏರಿಕೆ (ದಿನಕ್ಕೆ 70 ಪೈಸೆಗಿಂತ ಕಡಿಮೆ) ಮಾಡಲಾಗಿದೆ ಎಂದು ಭಾರ್ತಿ ಏರ್ಟೆಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿ ಟೆಲಿಕಾಂ ಕಂಪನಿಗಳು ಆರ್ಥಿಕವಾಗಿ ಆರೋಗ್ಯಕರ ವ್ಯವಹಾರ ಮಾಡಬೇಕು ಎಂದಿದ್ದರೆ ಮೊಬೈಲ್ ಸರಾಸರಿ ಆದಾಯ (ಎಆರ್‍ಪಿಯು) 300 ರೂ.ಗಿಂತ ಹೆಚ್ಚಾಗಿರಬೇಕು ಎಂದು ಭಾರ್ತಿ ಏರ್ಟೆಲ್ ಹೇಳಿದೆ. ಈ ಮಟ್ಟದ ಎಆರ್‍ಪಿಯು ನೆಟ್‍ವರ್ಕ್ ತಂತ್ರಜ್ಞಾನ ಮತ್ತು ಸ್ಪೆಕ್ಟ್ರಮ್‍ನಲ್ಲಿ ಅಗತ್ಯವಿರುವ ಗಣನೀಯ ಹೂಡಿಕೆಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಬಂಡವಾಳದ ಮೇಲೆ ಸಾಧಾರಣ ಆದಾಯವನ್ನು ನೀಡುತ್ತದೆ ಎಂದು ಅದು ಹೇಳಿದೆ.

ಭಾರ್ತಿ ಏರ್ಟೆಲ್ ಷೇರುಗಳು ಬಿಎಸ್‍ಇಯಲ್ಲಿ ಸುಮಾರು 2% ಏರಿಕೆಯಾಗಿ 1496.80 ರೂ.ಗೆ ತಲುಪಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಭಾರ್ತಿ ಏರ್ಟೆಲ್ ಎರಡೂ ಜೂನ್ 28ರ ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

10 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

10 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

11 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

11 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

12 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

15 hours ago