ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್ ಕಮಿಷರನ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ ಠಾಣೆಗಳಿಗೆ ವರ್ಗಾಯಿಸಲಾಯಿತು. ಅಲ್ಲಿಯೂ ಗೊಂದಲಯ ವಾತಾವರಣ ಮೂಡಬಾರದು ಎಂದು ವಾಹನದಲ್ಲಿ ಸಂಚಾರ ಮಾಡಿಸಲಾಯಿತು.
ಸುರ್ವಣ ವಿಧಾನಸೌಧದಿಂದ ಹಿರೇಬಾಗೇವಾಡಿ ಠಾಣೆ, ಅಲ್ಲಿಂದ ಖಾನಾಪುರ, ಬಳಿಕ ನಂದಗಡ ಠಾಣೆ, ಚನ್ನಮ್ಮನ ಕಿತ್ತೂರು, ದೊಡ್ಡವಾಡಿ, ಬೆಳವಡಿ, ಸವದತ್ತಿ, ಯರಗಟ್ಟಿ, ರಾಮದುರ್ಗ, ಗೋಕಾಕ ತಾಲೊಕಿನ ಅಂಕಲಗಿ ಸುತ್ತುವರಿದು ಮರಳಿ ಬೆಳಗಾವಿ ತಾಲೂಕಿನ ಮುತಗಾ ಗ್ರಾಮಗಳ ಮಾರ್ಗವಾಗಿ ಅವರನ್ನು ಸುತ್ತಾಡಿಸಲಾಯಿತು.
ಯರವಟ್ಟಿ ಢಾಬಾದಲ್ಲಿ ಉಪಾಹಾರ ನೀಡಿದರು. ನಸುಕಿನ 3.30ಕ್ಕೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ತಲೆಗೆ ಚಿಕಿತ್ಸೆ ಕೊಡಿಸಿದರು. ಬಳಿಕ ಆರೋಗ್ಯ ಪರೀಕ್ಷೆ ನಡೆಸಿದ ನ್ಯಾಯಾಲಯಕ್ಕೆ ಕರೆತರಲಾಯಿತು.
ಬಂಧನದ ಬಳಿಕ ರಾತ್ರಿಯಿಡೀ 500 ಕಿ.ಮೀ ಸುತ್ತಾಡಿಸಿದ್ದಾರೆ. ಮೂರು ಜಿಲ್ಲೆಗೆ ತಿರುಗಿಸಿದ್ದಾರೆ. ಒಂದಕ್ಕೆ ಹೋಗುವುದಕ್ಕೂ ಬಿಟ್ಟಿಲ್ಲ. ರಾಮದುರ್ಗ ಬಳಿ ಮೂತ್ರವಿಸರ್ಜನೆಗೆ ವಾಹನ ಬಿಟ್ಟು ಇಳಿದಾಗ ಪೊಲೀಸರು ಕ್ರಮಕ್ಕೆ ಅವರು ಚೀರಾಡಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…
ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…
ಟೆಹರಾನ್: ಯುದ್ಧದ ನಡುವೆಯೇ ಇರಾನ್ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ…