ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್ ಕಮಿಷರನ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ ಠಾಣೆಗಳಿಗೆ ವರ್ಗಾಯಿಸಲಾಯಿತು. ಅಲ್ಲಿಯೂ ಗೊಂದಲಯ ವಾತಾವರಣ ಮೂಡಬಾರದು ಎಂದು ವಾಹನದಲ್ಲಿ ಸಂಚಾರ ಮಾಡಿಸಲಾಯಿತು.
ಸುರ್ವಣ ವಿಧಾನಸೌಧದಿಂದ ಹಿರೇಬಾಗೇವಾಡಿ ಠಾಣೆ, ಅಲ್ಲಿಂದ ಖಾನಾಪುರ, ಬಳಿಕ ನಂದಗಡ ಠಾಣೆ, ಚನ್ನಮ್ಮನ ಕಿತ್ತೂರು, ದೊಡ್ಡವಾಡಿ, ಬೆಳವಡಿ, ಸವದತ್ತಿ, ಯರಗಟ್ಟಿ, ರಾಮದುರ್ಗ, ಗೋಕಾಕ ತಾಲೊಕಿನ ಅಂಕಲಗಿ ಸುತ್ತುವರಿದು ಮರಳಿ ಬೆಳಗಾವಿ ತಾಲೂಕಿನ ಮುತಗಾ ಗ್ರಾಮಗಳ ಮಾರ್ಗವಾಗಿ ಅವರನ್ನು ಸುತ್ತಾಡಿಸಲಾಯಿತು.
ಯರವಟ್ಟಿ ಢಾಬಾದಲ್ಲಿ ಉಪಾಹಾರ ನೀಡಿದರು. ನಸುಕಿನ 3.30ಕ್ಕೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ತಲೆಗೆ ಚಿಕಿತ್ಸೆ ಕೊಡಿಸಿದರು. ಬಳಿಕ ಆರೋಗ್ಯ ಪರೀಕ್ಷೆ ನಡೆಸಿದ ನ್ಯಾಯಾಲಯಕ್ಕೆ ಕರೆತರಲಾಯಿತು.
ಬಂಧನದ ಬಳಿಕ ರಾತ್ರಿಯಿಡೀ 500 ಕಿ.ಮೀ ಸುತ್ತಾಡಿಸಿದ್ದಾರೆ. ಮೂರು ಜಿಲ್ಲೆಗೆ ತಿರುಗಿಸಿದ್ದಾರೆ. ಒಂದಕ್ಕೆ ಹೋಗುವುದಕ್ಕೂ ಬಿಟ್ಟಿಲ್ಲ. ರಾಮದುರ್ಗ ಬಳಿ ಮೂತ್ರವಿಸರ್ಜನೆಗೆ ವಾಹನ ಬಿಟ್ಟು ಇಳಿದಾಗ ಪೊಲೀಸರು ಕ್ರಮಕ್ಕೆ ಅವರು ಚೀರಾಡಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…