ರಾಜ್ಯ

ರವಿ ಬಂಧನದ ಬಳಿಕ ರಾತ್ರಿಯಿಡೀ 500 ಕಿ.ಮೀ ಸುತ್ತಾಡಿಸಿದ ಪೊಲೀಸರು..!

ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್‌ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್‌ ಕಮಿಷರನ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ.

ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ ಠಾಣೆಗಳಿಗೆ ವರ್ಗಾಯಿಸಲಾಯಿತು. ಅಲ್ಲಿಯೂ ಗೊಂದಲಯ ವಾತಾವರಣ ಮೂಡಬಾರದು ಎಂದು ವಾಹನದಲ್ಲಿ ಸಂಚಾರ ಮಾಡಿಸಲಾಯಿತು.

ಸುರ್ವಣ ವಿಧಾನಸೌಧದಿಂದ ಹಿರೇಬಾಗೇವಾಡಿ ಠಾಣೆ, ಅಲ್ಲಿಂದ ಖಾನಾಪುರ, ಬಳಿಕ ನಂದಗಡ ಠಾಣೆ, ಚನ್ನಮ್ಮನ ಕಿತ್ತೂರು, ದೊಡ್ಡವಾಡಿ, ಬೆಳವಡಿ, ಸವದತ್ತಿ, ಯರಗಟ್ಟಿ, ರಾಮದುರ್ಗ, ಗೋಕಾಕ ತಾಲೊಕಿನ ಅಂಕಲಗಿ ಸುತ್ತುವರಿದು ಮರಳಿ ಬೆಳಗಾವಿ ತಾಲೂಕಿನ ಮುತಗಾ ಗ್ರಾಮಗಳ ಮಾರ್ಗವಾಗಿ ಅವರನ್ನು ಸುತ್ತಾಡಿಸಲಾಯಿತು.

ಯರವಟ್ಟಿ ಢಾಬಾದಲ್ಲಿ ಉಪಾಹಾರ ನೀಡಿದರು. ನಸುಕಿನ 3.30ಕ್ಕೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ತಲೆಗೆ ಚಿಕಿತ್ಸೆ ಕೊಡಿಸಿದರು. ಬಳಿಕ ಆರೋಗ್ಯ ಪರೀಕ್ಷೆ ನಡೆಸಿದ ನ್ಯಾಯಾಲಯಕ್ಕೆ ಕರೆತರಲಾಯಿತು.

ಬಂಧನದ ಬಳಿಕ ರಾತ್ರಿಯಿಡೀ 500 ಕಿ.ಮೀ ಸುತ್ತಾಡಿಸಿದ್ದಾರೆ. ಮೂರು ಜಿಲ್ಲೆಗೆ ತಿರುಗಿಸಿದ್ದಾರೆ. ಒಂದಕ್ಕೆ ಹೋಗುವುದಕ್ಕೂ ಬಿಟ್ಟಿಲ್ಲ. ರಾಮದುರ್ಗ ಬಳಿ ಮೂತ್ರವಿಸರ್ಜನೆಗೆ ವಾಹನ ಬಿಟ್ಟು ಇಳಿದಾಗ ಪೊಲೀಸರು ಕ್ರಮಕ್ಕೆ ಅವರು ಚೀರಾಡಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

14 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

14 hours ago