ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್ ಕಮಿಷರನ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ ಠಾಣೆಗಳಿಗೆ ವರ್ಗಾಯಿಸಲಾಯಿತು. ಅಲ್ಲಿಯೂ ಗೊಂದಲಯ ವಾತಾವರಣ ಮೂಡಬಾರದು ಎಂದು ವಾಹನದಲ್ಲಿ ಸಂಚಾರ ಮಾಡಿಸಲಾಯಿತು.
ಸುರ್ವಣ ವಿಧಾನಸೌಧದಿಂದ ಹಿರೇಬಾಗೇವಾಡಿ ಠಾಣೆ, ಅಲ್ಲಿಂದ ಖಾನಾಪುರ, ಬಳಿಕ ನಂದಗಡ ಠಾಣೆ, ಚನ್ನಮ್ಮನ ಕಿತ್ತೂರು, ದೊಡ್ಡವಾಡಿ, ಬೆಳವಡಿ, ಸವದತ್ತಿ, ಯರಗಟ್ಟಿ, ರಾಮದುರ್ಗ, ಗೋಕಾಕ ತಾಲೊಕಿನ ಅಂಕಲಗಿ ಸುತ್ತುವರಿದು ಮರಳಿ ಬೆಳಗಾವಿ ತಾಲೂಕಿನ ಮುತಗಾ ಗ್ರಾಮಗಳ ಮಾರ್ಗವಾಗಿ ಅವರನ್ನು ಸುತ್ತಾಡಿಸಲಾಯಿತು.
ಯರವಟ್ಟಿ ಢಾಬಾದಲ್ಲಿ ಉಪಾಹಾರ ನೀಡಿದರು. ನಸುಕಿನ 3.30ಕ್ಕೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ತಲೆಗೆ ಚಿಕಿತ್ಸೆ ಕೊಡಿಸಿದರು. ಬಳಿಕ ಆರೋಗ್ಯ ಪರೀಕ್ಷೆ ನಡೆಸಿದ ನ್ಯಾಯಾಲಯಕ್ಕೆ ಕರೆತರಲಾಯಿತು.
ಬಂಧನದ ಬಳಿಕ ರಾತ್ರಿಯಿಡೀ 500 ಕಿ.ಮೀ ಸುತ್ತಾಡಿಸಿದ್ದಾರೆ. ಮೂರು ಜಿಲ್ಲೆಗೆ ತಿರುಗಿಸಿದ್ದಾರೆ. ಒಂದಕ್ಕೆ ಹೋಗುವುದಕ್ಕೂ ಬಿಟ್ಟಿಲ್ಲ. ರಾಮದುರ್ಗ ಬಳಿ ಮೂತ್ರವಿಸರ್ಜನೆಗೆ ವಾಹನ ಬಿಟ್ಟು ಇಳಿದಾಗ ಪೊಲೀಸರು ಕ್ರಮಕ್ಕೆ ಅವರು ಚೀರಾಡಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದರು.
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…
ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…
ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…
ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…