ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ.
ಸಿದ್ದಾರ್ಥ ವಿಹಾರ ಟ್ರಸ್ಟ್ನ ಸಿಎ ಸೈಟ್ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್ ಹಿಂತಿರುಗಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೆಐಎಡಿಬಿ ಹಂಚಿಕೆ ಮಾಡಿದ್ದ ನಿವೇಶನವನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ. ಏಕೆಂದರೆ ಈ ನಿವೇಶನದ ಬಗ್ಗೆ ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಅಲ್ಲದೇ, ಈ ವಿಚಾರದಲ್ಲಿ ಟ್ರಸ್ಟ್ನ ಅಧ್ಯಕ್ಷ ರಾಹುಲ್ ಅವರಿಗೆ ಮಾಹಿತಿ ದೊರಕಿರಲಿಲ್ಲ ಅಂತ ಅನ್ನಿಸುತ್ತೆ. ನಮ್ಮ ಕುಟುಂಬದಿಂದ ಮೂರು ಮಂದಿ ಅಷ್ಟೇ ರಾಜಕೀಯದಲ್ಲಿ ಸಕ್ರಿಯವಾಗಿದ್ದೇವೆ ಎಂದರು.
ನಂತರ, ನಮ್ಮ ಅಣ್ಣ ರಾಹುಲ್ ಖರ್ಗೆ ಅವರು ಮೃದು ಸ್ವಭಾವದ ವ್ಯಕ್ತಿಯಾಗಿದ್ದಾರೆ. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್.29 ರಂದು ಕೆಐಎಡಿಬಿಗೆ ಹಂಚಿಕೆಯಾಗಿರುವ ಸೈಟ್ಗಳನ್ನು ಹಿಂಪಡೆಯಲು ಪತ್ರ ಬರೆದಿದ್ದು, ನಿವೇಶನಗಳನ್ನು ನೀಡಿರುವುದನ್ನು ಕಾನೂನಾತ್ಮಕವಾಗಿಯೇ ಮರಳಿ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…