ರಾಜ್ಯ

ವಿವಾದದ ಬಳಿಕ ಕೆಐಎಡಿಬಿಗೆ ಸೈಟ್‌ ವಾಪಸ್‌ ನೀಡಿದ ಖರ್ಗೆ ಕುಟುಂಬ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್‌ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್‌ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ.

ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಸಿಎ ಸೈಟ್‌ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್‌ ಹಿಂತಿರುಗಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಕೆಐಎಡಿಬಿ ಹಂಚಿಕೆ ಮಾಡಿದ್ದ ನಿವೇಶನವನ್ನು ವಾಪಾಸ್‌ ನೀಡಲು ತೀರ್ಮಾನಿಸಲಾಗಿದೆ. ಏಕೆಂದರೆ ಈ ನಿವೇಶನದ ಬಗ್ಗೆ ಕಾನೂನು ಬಾಹಿರವಾಗಿ ಸೈಟ್‌ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಅಲ್ಲದೇ, ಈ ವಿಚಾರದಲ್ಲಿ ಟ್ರಸ್ಟ್‌ನ ಅಧ್ಯಕ್ಷ ರಾಹುಲ್‌ ಅವರಿಗೆ ಮಾಹಿತಿ ದೊರಕಿರಲಿಲ್ಲ ಅಂತ ಅನ್ನಿಸುತ್ತೆ. ನಮ್ಮ ಕುಟುಂಬದಿಂದ ಮೂರು ಮಂದಿ ಅಷ್ಟೇ ರಾಜಕೀಯದಲ್ಲಿ ಸಕ್ರಿಯವಾಗಿದ್ದೇವೆ ಎಂದರು.

ನಂತರ, ನಮ್ಮ ಅಣ್ಣ ರಾಹುಲ್‌ ಖರ್ಗೆ ಅವರು ಮೃದು ಸ್ವಭಾವದ ವ್ಯಕ್ತಿಯಾಗಿದ್ದಾರೆ. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್‌.29 ರಂದು ಕೆಐಎಡಿಬಿಗೆ ಹಂಚಿಕೆಯಾಗಿರುವ ಸೈಟ್‌ಗಳನ್ನು ಹಿಂಪಡೆಯಲು ಪತ್ರ ಬರೆದಿದ್ದು, ನಿವೇಶನಗಳನ್ನು ನೀಡಿರುವುದನ್ನು ಕಾನೂನಾತ್ಮಕವಾಗಿಯೇ ಮರಳಿ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

2 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

16 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

17 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

23 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

24 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 day ago