ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ.
ಸಿದ್ದಾರ್ಥ ವಿಹಾರ ಟ್ರಸ್ಟ್ನ ಸಿಎ ಸೈಟ್ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್ ಹಿಂತಿರುಗಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೆಐಎಡಿಬಿ ಹಂಚಿಕೆ ಮಾಡಿದ್ದ ನಿವೇಶನವನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ. ಏಕೆಂದರೆ ಈ ನಿವೇಶನದ ಬಗ್ಗೆ ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಅಲ್ಲದೇ, ಈ ವಿಚಾರದಲ್ಲಿ ಟ್ರಸ್ಟ್ನ ಅಧ್ಯಕ್ಷ ರಾಹುಲ್ ಅವರಿಗೆ ಮಾಹಿತಿ ದೊರಕಿರಲಿಲ್ಲ ಅಂತ ಅನ್ನಿಸುತ್ತೆ. ನಮ್ಮ ಕುಟುಂಬದಿಂದ ಮೂರು ಮಂದಿ ಅಷ್ಟೇ ರಾಜಕೀಯದಲ್ಲಿ ಸಕ್ರಿಯವಾಗಿದ್ದೇವೆ ಎಂದರು.
ನಂತರ, ನಮ್ಮ ಅಣ್ಣ ರಾಹುಲ್ ಖರ್ಗೆ ಅವರು ಮೃದು ಸ್ವಭಾವದ ವ್ಯಕ್ತಿಯಾಗಿದ್ದಾರೆ. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್.29 ರಂದು ಕೆಐಎಡಿಬಿಗೆ ಹಂಚಿಕೆಯಾಗಿರುವ ಸೈಟ್ಗಳನ್ನು ಹಿಂಪಡೆಯಲು ಪತ್ರ ಬರೆದಿದ್ದು, ನಿವೇಶನಗಳನ್ನು ನೀಡಿರುವುದನ್ನು ಕಾನೂನಾತ್ಮಕವಾಗಿಯೇ ಮರಳಿ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…