ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ.
ಸಿದ್ದಾರ್ಥ ವಿಹಾರ ಟ್ರಸ್ಟ್ನ ಸಿಎ ಸೈಟ್ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್ ಹಿಂತಿರುಗಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೆಐಎಡಿಬಿ ಹಂಚಿಕೆ ಮಾಡಿದ್ದ ನಿವೇಶನವನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ. ಏಕೆಂದರೆ ಈ ನಿವೇಶನದ ಬಗ್ಗೆ ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಅಲ್ಲದೇ, ಈ ವಿಚಾರದಲ್ಲಿ ಟ್ರಸ್ಟ್ನ ಅಧ್ಯಕ್ಷ ರಾಹುಲ್ ಅವರಿಗೆ ಮಾಹಿತಿ ದೊರಕಿರಲಿಲ್ಲ ಅಂತ ಅನ್ನಿಸುತ್ತೆ. ನಮ್ಮ ಕುಟುಂಬದಿಂದ ಮೂರು ಮಂದಿ ಅಷ್ಟೇ ರಾಜಕೀಯದಲ್ಲಿ ಸಕ್ರಿಯವಾಗಿದ್ದೇವೆ ಎಂದರು.
ನಂತರ, ನಮ್ಮ ಅಣ್ಣ ರಾಹುಲ್ ಖರ್ಗೆ ಅವರು ಮೃದು ಸ್ವಭಾವದ ವ್ಯಕ್ತಿಯಾಗಿದ್ದಾರೆ. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್.29 ರಂದು ಕೆಐಎಡಿಬಿಗೆ ಹಂಚಿಕೆಯಾಗಿರುವ ಸೈಟ್ಗಳನ್ನು ಹಿಂಪಡೆಯಲು ಪತ್ರ ಬರೆದಿದ್ದು, ನಿವೇಶನಗಳನ್ನು ನೀಡಿರುವುದನ್ನು ಕಾನೂನಾತ್ಮಕವಾಗಿಯೇ ಮರಳಿ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…