ರಾಜ್ಯ

ಸಾರಿಗೆ ಬಸ್‌ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳಕ್ಕೆ ಒತ್ತಡ

ಬೆಂಗಳೂರು: ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡಬೇಕೆಂದು ಕೆಲ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ.

ಸಾರಿಗೆ ನಿಗಮಗಳ ನಷ್ಟ ತುಂಬಿಸಲು ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ಪ್ರಯಾಣ ದರವನ್ನು 7 ರೂಪಾಯಿಂದ 115 ರವರೆಗೆ ದರ ಏರಿಕೆ ಮಾಡಿದೆ. ಈ ನಡುವೆ ಆಟೋರಿಕ್ಷಾ ಪ್ರಯಾಣದ ದರವನ್ನು ಏರಿಸುವಂತೆ ಮನವಿ ಮಾಡಿದ್ದಾರೆ.

ಆಟೋರಿಕ್ಷಾ ಪ್ರಯಾಣ ದರ 1 ಕಿಲೋ ಮೀಟರ್‌ಗೆ 5 ರೂಪಾಯಿ 2 ಕಿಲೋ ಮೀಟರ್‌ಗೆ 10 ರೂಪಾಯಿ ಏರಿಕೆ ಮಾಡುವಂತೆ ಮನವಿ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್‌ಗೆ 30 ರೂಪಾಯಿ ಇದೆ. ಇದೀಗ 40ಕ್ಕೆ ಏರಿಸುವಂತೆ ಕೋರಿವೆ.

ದರ ಏರಿಕೆ ಸಂಬಂಧ ಇದೇ ತಿಂಗಳ ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣದ ದರ ಏರಿಕೆ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಆಗಲಿದೆ.

ಈ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ- ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಯನಗರ ಆರ್‌ಟಿಓ ಕಚೇರಿಯ ಓರ್ವ ಅಧಿಕಾರಿ-ಕಾರ್ಯದರ್ಶಿ ಹಾಗೂ ಟ್ರಾಫಿಕ್‌ ಡಿಸಿಪಿ, ಗ್ರಾಹಕರ ವೇದಿಕೆಯಿಂದ ಓರ್ವ ಅಧಿಕಾರಿ ಕಮಿಟಿ ಸದಸ್ಯರು ಇರಲಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

2 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago