ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.
ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…