ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.
ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…