ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.
ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…