ರಾಜ್ಯ

ಅಗ್ನಿವೀರ್‌ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2004 ರ ಜುಲೈ 3 ರಿಂದ 2008 ರ ಮಾರ್ಚ್‌ 3 ರೊಳಗೆ ಜನಿಸಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿಯಲ್ಲಿ ಪಾಸಾದವರು ಹಾಗೂ ಪಿಯುಸಿ ವಿಜ್ಞಾನದ ವಿಷಯದಲ್ಲಿ ಗಣಿತ, ಭೌತಶಾಸ್ತç, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಮತ್ತು ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಶಿಕ್ಷಣದಲ್ಲಿ ಗಣಿತ, ಶಾಸ್ತ್ರ, ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ವಿಜ್ಞಾನೇತರ ವಿಷಯದಲ್ಲಿ ಪಿಯುಸಿಯ ಯಾವುದೇ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.

ಪುರುಷ ಅಭ್ಯರ್ಥಿಗಳಿಗೆ ಎತ್ತರ 152.5 ಸೆಂ.ಮಿ, ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಎದೆಯ ಸುತ್ತಳತೆ 77ಸೆ.ಮಿ ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎತ್ತರ 152 ಸೆಂ.ಮಿ ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಅರ್ಜಿ ಶುಲ್ಕ 250 ರೂ.ಗಳಾಗಿದ್ದು ಆನ್‌ಲೈನ್‌ನಲ್ಲಿ https://agnipathvayu.cdac.in ವೆಬ್‌ಸೈಟ್ ಮೂಲಕ ದಿನಾಂಕ 08-07-2024 ರಿಂದ 28-07-2024 ಅರ್ಜಿಸಲ್ಲಿಸಬಹುದಾಗಿದ್ದು, ಅಕ್ಟೋಬರ್ 18 ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

10 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

29 mins ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

37 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

1 hour ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

1 hour ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

2 hours ago