ರಾಜ್ಯ

ಅಗ್ನಿವೀರ್‌ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2004 ರ ಜುಲೈ 3 ರಿಂದ 2008 ರ ಮಾರ್ಚ್‌ 3 ರೊಳಗೆ ಜನಿಸಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿಯಲ್ಲಿ ಪಾಸಾದವರು ಹಾಗೂ ಪಿಯುಸಿ ವಿಜ್ಞಾನದ ವಿಷಯದಲ್ಲಿ ಗಣಿತ, ಭೌತಶಾಸ್ತç, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಮತ್ತು ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಶಿಕ್ಷಣದಲ್ಲಿ ಗಣಿತ, ಶಾಸ್ತ್ರ, ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ವಿಜ್ಞಾನೇತರ ವಿಷಯದಲ್ಲಿ ಪಿಯುಸಿಯ ಯಾವುದೇ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.

ಪುರುಷ ಅಭ್ಯರ್ಥಿಗಳಿಗೆ ಎತ್ತರ 152.5 ಸೆಂ.ಮಿ, ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಎದೆಯ ಸುತ್ತಳತೆ 77ಸೆ.ಮಿ ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎತ್ತರ 152 ಸೆಂ.ಮಿ ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಅರ್ಜಿ ಶುಲ್ಕ 250 ರೂ.ಗಳಾಗಿದ್ದು ಆನ್‌ಲೈನ್‌ನಲ್ಲಿ https://agnipathvayu.cdac.in ವೆಬ್‌ಸೈಟ್ ಮೂಲಕ ದಿನಾಂಕ 08-07-2024 ರಿಂದ 28-07-2024 ಅರ್ಜಿಸಲ್ಲಿಸಬಹುದಾಗಿದ್ದು, ಅಕ್ಟೋಬರ್ 18 ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

5 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

8 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

9 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

9 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

9 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

10 hours ago