ರಾಜ್ಯ

ಅಗ್ನಿವೀರ್‌ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2004 ರ ಜುಲೈ 3 ರಿಂದ 2008 ರ ಮಾರ್ಚ್‌ 3 ರೊಳಗೆ ಜನಿಸಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿಯಲ್ಲಿ ಪಾಸಾದವರು ಹಾಗೂ ಪಿಯುಸಿ ವಿಜ್ಞಾನದ ವಿಷಯದಲ್ಲಿ ಗಣಿತ, ಭೌತಶಾಸ್ತç, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಮತ್ತು ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಶಿಕ್ಷಣದಲ್ಲಿ ಗಣಿತ, ಶಾಸ್ತ್ರ, ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ವಿಜ್ಞಾನೇತರ ವಿಷಯದಲ್ಲಿ ಪಿಯುಸಿಯ ಯಾವುದೇ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.

ಪುರುಷ ಅಭ್ಯರ್ಥಿಗಳಿಗೆ ಎತ್ತರ 152.5 ಸೆಂ.ಮಿ, ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಎದೆಯ ಸುತ್ತಳತೆ 77ಸೆ.ಮಿ ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎತ್ತರ 152 ಸೆಂ.ಮಿ ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಅರ್ಜಿ ಶುಲ್ಕ 250 ರೂ.ಗಳಾಗಿದ್ದು ಆನ್‌ಲೈನ್‌ನಲ್ಲಿ https://agnipathvayu.cdac.in ವೆಬ್‌ಸೈಟ್ ಮೂಲಕ ದಿನಾಂಕ 08-07-2024 ರಿಂದ 28-07-2024 ಅರ್ಜಿಸಲ್ಲಿಸಬಹುದಾಗಿದ್ದು, ಅಕ್ಟೋಬರ್ 18 ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

3 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

3 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

3 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

4 hours ago