ರಾಜ್ಯ

ಅಗ್ನಿವೀರ್‌ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2004 ರ ಜುಲೈ 3 ರಿಂದ 2008 ರ ಮಾರ್ಚ್‌ 3 ರೊಳಗೆ ಜನಿಸಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿಯಲ್ಲಿ ಪಾಸಾದವರು ಹಾಗೂ ಪಿಯುಸಿ ವಿಜ್ಞಾನದ ವಿಷಯದಲ್ಲಿ ಗಣಿತ, ಭೌತಶಾಸ್ತç, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಮತ್ತು ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಶಿಕ್ಷಣದಲ್ಲಿ ಗಣಿತ, ಶಾಸ್ತ್ರ, ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ವಿಜ್ಞಾನೇತರ ವಿಷಯದಲ್ಲಿ ಪಿಯುಸಿಯ ಯಾವುದೇ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.

ಪುರುಷ ಅಭ್ಯರ್ಥಿಗಳಿಗೆ ಎತ್ತರ 152.5 ಸೆಂ.ಮಿ, ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಎದೆಯ ಸುತ್ತಳತೆ 77ಸೆ.ಮಿ ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎತ್ತರ 152 ಸೆಂ.ಮಿ ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಅರ್ಜಿ ಶುಲ್ಕ 250 ರೂ.ಗಳಾಗಿದ್ದು ಆನ್‌ಲೈನ್‌ನಲ್ಲಿ https://agnipathvayu.cdac.in ವೆಬ್‌ಸೈಟ್ ಮೂಲಕ ದಿನಾಂಕ 08-07-2024 ರಿಂದ 28-07-2024 ಅರ್ಜಿಸಲ್ಲಿಸಬಹುದಾಗಿದ್ದು, ಅಕ್ಟೋಬರ್ 18 ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ : ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಏಟು ; ವಾಹನ ಜಖಂ

ಬಿಡದಿ : ಬಿಡದಿ ಟೌನ್​ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…

2 hours ago

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

7 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

7 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

14 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

14 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

14 hours ago