ರಾಜ್ಯ

ಅಗ್ನಿವೀರ್‌ ನೇಮಕಾತಿಗೆ ಅರ್ಜಿ ಆಹ್ವಾನ

ಮೈಸೂರು: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2004 ರ ಜುಲೈ 3 ರಿಂದ 2008 ರ ಮಾರ್ಚ್‌ 3 ರೊಳಗೆ ಜನಿಸಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿಯಲ್ಲಿ ಪಾಸಾದವರು ಹಾಗೂ ಪಿಯುಸಿ ವಿಜ್ಞಾನದ ವಿಷಯದಲ್ಲಿ ಗಣಿತ, ಭೌತಶಾಸ್ತç, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷದ ಡಿಪ್ಲೋಮದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಮತ್ತು ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಶಿಕ್ಷಣದಲ್ಲಿ ಗಣಿತ, ಶಾಸ್ತ್ರ, ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ವಿಜ್ಞಾನೇತರ ವಿಷಯದಲ್ಲಿ ಪಿಯುಸಿಯ ಯಾವುದೇ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ಇಂಗ್ಲೀಷ್‌ನಲ್ಲಿ ಕನಿಷ್ಟ ಶೇ.50 ಅಂಕಗಳೊoದಿಗೆ ತೇರ್ಗಡೆ ಹೊಂದಿರುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.

ಪುರುಷ ಅಭ್ಯರ್ಥಿಗಳಿಗೆ ಎತ್ತರ 152.5 ಸೆಂ.ಮಿ, ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಎದೆಯ ಸುತ್ತಳತೆ 77ಸೆ.ಮಿ ಇರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎತ್ತರ 152 ಸೆಂ.ಮಿ ತೂಕ ಎತ್ತರಕ್ಕೆ ಅನುಗುಣವಾಗಿರತಕ್ಕದ್ದು. ಅರ್ಜಿ ಶುಲ್ಕ 250 ರೂ.ಗಳಾಗಿದ್ದು ಆನ್‌ಲೈನ್‌ನಲ್ಲಿ https://agnipathvayu.cdac.in ವೆಬ್‌ಸೈಟ್ ಮೂಲಕ ದಿನಾಂಕ 08-07-2024 ರಿಂದ 28-07-2024 ಅರ್ಜಿಸಲ್ಲಿಸಬಹುದಾಗಿದ್ದು, ಅಕ್ಟೋಬರ್ 18 ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರ ದೂ.ಸಂ: 0821-2489972 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

14 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

16 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

18 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

18 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

19 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

19 hours ago