ರಾಜ್ಯ

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.

ತಮ್ಮ ಕಚೇರಿಯಲ್ಲಿಂದು ಇಂಡಿಯನ್ ಸ್ಟಾರ್ಟಫ್ ಟೂರ್ 2024 ಅಂಗವಾಗಿ ದೇಶದ ವಿವಿಧೆಡೆಯಿಂದ ಆಗಮಿಸಿದ ಛಾತ್ರ ಸಂಸದ್ ನ ಯುವ ನವೋದ್ಯಮಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ ಅವರು
ಕೃಷಿ ಅಭ್ಯುದಯಕ್ಕೆ ಸರ್ಕಾರ ಹತ್ತಾರು ಪ್ರಮುಖ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದರು.

ರಾಜ್ಯದಲ್ಲಿ ಬಹುತೇಕ ಮಳೆಯಾಶ್ರಿತ ಜಮೀನು ಹೊಂದಿದ್ದು ಬರ ಹಾಗೂ ಅತೀವೃಷ್ಠಿ ನಮ್ಮ ಮುಂದಿರುವ ಬಹುದೊಡ್ಡ ಸವಾಲಾಗಿದೆ ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವೂ ಶ್ರಮಿಸುತ್ತಿದೆ ಎಂದರು.

ಕೃಷಿ ಯಾಂತ್ರೀಕರಣ, ಮೌಲ್ಯ ವರ್ಧನೆ, ಉತ್ಪಾದನೆ ಹೆಚ್ಚಳ ನಮ್ಮ ಆದ್ಯತೆ. ಮಾರುಕಟ್ಟೆ ಸರಪಣಿ ಬಲ ಪಡಿಸಲೂ ಸಹ ನಮ್ಮ ಸರ್ಕಾರ ಗಮನ ಹರಿಸಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಛಾತ್ರ ಸಂಸದ್ ನ ಪ್ರತಿನಿಧಿಗಳ ಅಭಿಪ್ರಾಯ ಅಲಿಸಿದ ಸಚಿವರು ಅವರ ಪ್ರಶ್ನೆಗಳಿಗೂ ಉತ್ತರ ನೀಡಿದರು.
ದೇಶದಲ್ಲಿ ಕರ್ನಾಟಕ ತಂತ್ರಜ್ಞಾನ ಬಳಕೆಯಲ್ಲಿ ನಾಲ್ಕನೆಯ ಸ್ಥಾನದಲ್ಲಿದೆ. ಜಲಾನಯನ ಅಭಿವೃದ್ಧಿಯಲ್ಲಿಯೂ ವಿಶ್ವ ಬ್ಯಾಂಕ್ ನಮ್ಮ ರಾಜ್ಯವನ್ನು ಮುಂಚೂಣಿ ನಾಯಕನಂತೆ ಗುರುತಿಸಿದೆ ಎಂದರು.

ರಾಜ್ಯದಲ್ಲಿ ಬೆಳೆ ವಿಮೆ ನೊಂದಣಿ ,ಪರಿಹಾರ ಇತ್ಯರ್ಥ ,ಬೆಳೆ ಸಮೀಕ್ಷೆಗಳು ಪರಿಣಾಮಕಾರಿಯಾಗಿ ನಡೆಯುತ್ತಿವೆ ಎಂದರು.

ಸಮಗ್ರ ಕೃಷಿ ಹೆಚ್ಚು ಲಾಭದಾಯಕ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗಿದೆ ರೈತರು ಅದನ್ನು ಅನುಸರಿಸುವುದು ಉತ್ತಮ ಎಂದು ಕೃಷಿ ಸಚಿವರು ಅಭಿಪ್ರಾಯ ಪಟ್ಟರು.

ಕೃಷಿ ಇಲಾಖೆ ಕಾರ್ಯದರ್ಶಿ ವಿ. ಅನ್ಬುಕುಮಾರ್, ಆಯುಕ್ತರಾದ ವೈ.ಎಸ್ ಪಾಟೀಲ್, ನಿರ್ದೇಶಕರಾದ ಡಾ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಅಯುಕ್ತರಾದ ಮಹೇಶ್ ಶಿರೂರು, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್ ಮತ್ತಿತರು ಹಾಜರಿದ್ದು ನವೋದ್ಯಮಿಗಳಿಗೆ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

3 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

6 hours ago