ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಇಸ್ರೇಲ್ ದೇಶದ ಪ್ರತಿನಿಧಿಗಳೊಂದಿಗೆ ಕೃಷಿಯಲ್ಲಿ ಹೊಸ ಸಂಭಾವ್ಯ ಸುಧಾರಣೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಹವಾಮಾನ ಬದಲಾವಣೆ, ನೀರಿನ ಮಿತ ಬಳಕೆ, ವೈಜ್ಞಾನಿಕ ಕೃಷಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ ಸಚಿವರು, ರಾಜ್ಯದ ಕೃಷಿ ಪದ್ದತಿಯಲ್ಲಿ ಪರಿಣಾಕಾರಿ ಹಾಗೂ ಗುಣಾತ್ಮಕ ಬದಲಾವಣೆಗೆ ಸಲಹೆ ಸಹಕಾರ ನೀಡುವಂತೆ ಕೋರಿದರು.
ಇಸ್ರೇಲ್ ನ ಕೃಷಿ ಸಂಸ್ಕೃತಿ, ತಳಿ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕೃಷಿ ಇಲಾಖೆ, ವಿಶ್ವವಿದ್ಯಾಲಯಗಳ ಪಾತ್ರದ ಬಗ್ಗೆ ಮಾಹಿತಿ ಪಡೆದರು. ರಾಜ್ಯದಲ್ಲಿನ ಪರಿಸ್ಥಿತಿ, ನಡೆಸಲಾಗುತ್ತಿರುವ ನಿರಂತರ ಸಂಶೋಧನೆಗಳು ಕೃಷಿ ಭೂಮಿಗೆ ಅದರ ವರ್ಗಾವಣೆ, ಸರ್ಕಾರದ ಯೋಜನೆ, ನೀರಿನ ಸಂಸ್ಕರಣೆ, ಮರು ಬಳಕೆ ರೈತ ತರಬೇತಿ ಕಾರ್ಯಕ್ರಮಗಳು ತಂತ್ರಜ್ಞನಗಳ ವರ್ಗಾವಣೆಗಳ ಪ್ರೋತ್ಸಾಹ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಸ್ರೇಲ್ ದೇಶದ ಡೆಪ್ಯೂಟಿ ಕಾನ್ಸಲೇಟ್ ಜನರಲ್ ಲೈಮೋರ್ ಬ್ಲೆಟರ್, ಇಸ್ರೇಲ್ ನಲ್ಲಿರುವ SOLED & DATA PANEL ಕಂಪನಿಯ ಕೋ ಫೌಂಡರ್, ಡಾನ ಪೌಷ್ಟಿ, ಹಾಗೂ CSO, CLIMATE CROP ಕಂಪನಿಯ ಕೋ ಫೌಂಡರ್ ವಿವೇಕಾನಂದ ತಿವಾರಿ, ಇಸ್ರೇಲ್ ದೇಶದ ಕಾನ್ಸಲೇಟ್ ಸಿಬ್ಬಂದಿ ರೇಷ್ಮ, ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಡಾ. ಜಿ.ಟಿ.ಪುತ್ರ, ಅಪರ ನಿರ್ದೇಶಕ ರೆಡ್ಡಿ, ಸಭೆಯಲ್ಲಿ ಭಾಗವಹಿಸಿದ್ದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…