ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಇಸ್ರೇಲ್ ದೇಶದ ಪ್ರತಿನಿಧಿಗಳೊಂದಿಗೆ ಕೃಷಿಯಲ್ಲಿ ಹೊಸ ಸಂಭಾವ್ಯ ಸುಧಾರಣೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಹವಾಮಾನ ಬದಲಾವಣೆ, ನೀರಿನ ಮಿತ ಬಳಕೆ, ವೈಜ್ಞಾನಿಕ ಕೃಷಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ ಸಚಿವರು, ರಾಜ್ಯದ ಕೃಷಿ ಪದ್ದತಿಯಲ್ಲಿ ಪರಿಣಾಕಾರಿ ಹಾಗೂ ಗುಣಾತ್ಮಕ ಬದಲಾವಣೆಗೆ ಸಲಹೆ ಸಹಕಾರ ನೀಡುವಂತೆ ಕೋರಿದರು.
ಇಸ್ರೇಲ್ ನ ಕೃಷಿ ಸಂಸ್ಕೃತಿ, ತಳಿ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕೃಷಿ ಇಲಾಖೆ, ವಿಶ್ವವಿದ್ಯಾಲಯಗಳ ಪಾತ್ರದ ಬಗ್ಗೆ ಮಾಹಿತಿ ಪಡೆದರು. ರಾಜ್ಯದಲ್ಲಿನ ಪರಿಸ್ಥಿತಿ, ನಡೆಸಲಾಗುತ್ತಿರುವ ನಿರಂತರ ಸಂಶೋಧನೆಗಳು ಕೃಷಿ ಭೂಮಿಗೆ ಅದರ ವರ್ಗಾವಣೆ, ಸರ್ಕಾರದ ಯೋಜನೆ, ನೀರಿನ ಸಂಸ್ಕರಣೆ, ಮರು ಬಳಕೆ ರೈತ ತರಬೇತಿ ಕಾರ್ಯಕ್ರಮಗಳು ತಂತ್ರಜ್ಞನಗಳ ವರ್ಗಾವಣೆಗಳ ಪ್ರೋತ್ಸಾಹ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಸ್ರೇಲ್ ದೇಶದ ಡೆಪ್ಯೂಟಿ ಕಾನ್ಸಲೇಟ್ ಜನರಲ್ ಲೈಮೋರ್ ಬ್ಲೆಟರ್, ಇಸ್ರೇಲ್ ನಲ್ಲಿರುವ SOLED & DATA PANEL ಕಂಪನಿಯ ಕೋ ಫೌಂಡರ್, ಡಾನ ಪೌಷ್ಟಿ, ಹಾಗೂ CSO, CLIMATE CROP ಕಂಪನಿಯ ಕೋ ಫೌಂಡರ್ ವಿವೇಕಾನಂದ ತಿವಾರಿ, ಇಸ್ರೇಲ್ ದೇಶದ ಕಾನ್ಸಲೇಟ್ ಸಿಬ್ಬಂದಿ ರೇಷ್ಮ, ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಡಾ. ಜಿ.ಟಿ.ಪುತ್ರ, ಅಪರ ನಿರ್ದೇಶಕ ರೆಡ್ಡಿ, ಸಭೆಯಲ್ಲಿ ಭಾಗವಹಿಸಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…