ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಇಸ್ರೇಲ್ ದೇಶದ ಪ್ರತಿನಿಧಿಗಳೊಂದಿಗೆ ಕೃಷಿಯಲ್ಲಿ ಹೊಸ ಸಂಭಾವ್ಯ ಸುಧಾರಣೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಹವಾಮಾನ ಬದಲಾವಣೆ, ನೀರಿನ ಮಿತ ಬಳಕೆ, ವೈಜ್ಞಾನಿಕ ಕೃಷಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ ಸಚಿವರು, ರಾಜ್ಯದ ಕೃಷಿ ಪದ್ದತಿಯಲ್ಲಿ ಪರಿಣಾಕಾರಿ ಹಾಗೂ ಗುಣಾತ್ಮಕ ಬದಲಾವಣೆಗೆ ಸಲಹೆ ಸಹಕಾರ ನೀಡುವಂತೆ ಕೋರಿದರು.
ಇಸ್ರೇಲ್ ನ ಕೃಷಿ ಸಂಸ್ಕೃತಿ, ತಳಿ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕೃಷಿ ಇಲಾಖೆ, ವಿಶ್ವವಿದ್ಯಾಲಯಗಳ ಪಾತ್ರದ ಬಗ್ಗೆ ಮಾಹಿತಿ ಪಡೆದರು. ರಾಜ್ಯದಲ್ಲಿನ ಪರಿಸ್ಥಿತಿ, ನಡೆಸಲಾಗುತ್ತಿರುವ ನಿರಂತರ ಸಂಶೋಧನೆಗಳು ಕೃಷಿ ಭೂಮಿಗೆ ಅದರ ವರ್ಗಾವಣೆ, ಸರ್ಕಾರದ ಯೋಜನೆ, ನೀರಿನ ಸಂಸ್ಕರಣೆ, ಮರು ಬಳಕೆ ರೈತ ತರಬೇತಿ ಕಾರ್ಯಕ್ರಮಗಳು ತಂತ್ರಜ್ಞನಗಳ ವರ್ಗಾವಣೆಗಳ ಪ್ರೋತ್ಸಾಹ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಸ್ರೇಲ್ ದೇಶದ ಡೆಪ್ಯೂಟಿ ಕಾನ್ಸಲೇಟ್ ಜನರಲ್ ಲೈಮೋರ್ ಬ್ಲೆಟರ್, ಇಸ್ರೇಲ್ ನಲ್ಲಿರುವ SOLED & DATA PANEL ಕಂಪನಿಯ ಕೋ ಫೌಂಡರ್, ಡಾನ ಪೌಷ್ಟಿ, ಹಾಗೂ CSO, CLIMATE CROP ಕಂಪನಿಯ ಕೋ ಫೌಂಡರ್ ವಿವೇಕಾನಂದ ತಿವಾರಿ, ಇಸ್ರೇಲ್ ದೇಶದ ಕಾನ್ಸಲೇಟ್ ಸಿಬ್ಬಂದಿ ರೇಷ್ಮ, ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಡಾ. ಜಿ.ಟಿ.ಪುತ್ರ, ಅಪರ ನಿರ್ದೇಶಕ ರೆಡ್ಡಿ, ಸಭೆಯಲ್ಲಿ ಭಾಗವಹಿಸಿದ್ದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…