ರಾಜ್ಯ

ಇಸ್ರೇಲ್ ಪ್ರತಿನಿಧಿಗಳೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಚರ್ಚೆ

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇಂದು ತಮ್ಮ ಕಚೇರಿಯಲ್ಲಿ ಇಸ್ರೇಲ್ ದೇಶದ ಪ್ರತಿನಿಧಿಗಳೊಂದಿಗೆ ಕೃಷಿಯಲ್ಲಿ ಹೊಸ ಸಂಭಾವ್ಯ ಸುಧಾರಣೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಹವಾಮಾನ ಬದಲಾವಣೆ, ನೀರಿನ ಮಿತ ಬಳಕೆ, ವೈಜ್ಞಾನಿಕ ಕೃಷಿ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ ಸಚಿವರು, ರಾಜ್ಯದ ಕೃಷಿ ಪದ್ದತಿಯಲ್ಲಿ ಪರಿಣಾಕಾರಿ ಹಾಗೂ ಗುಣಾತ್ಮಕ ಬದಲಾವಣೆಗೆ ಸಲಹೆ ಸಹಕಾರ ನೀಡುವಂತೆ ಕೋರಿದರು.

ಇಸ್ರೇಲ್ ನ ಕೃಷಿ ಸಂಸ್ಕೃತಿ, ತಳಿ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕೃಷಿ ಇಲಾಖೆ, ವಿಶ್ವವಿದ್ಯಾಲಯಗಳ ಪಾತ್ರದ ಬಗ್ಗೆ ಮಾಹಿತಿ ಪಡೆದರು. ರಾಜ್ಯದಲ್ಲಿನ ಪರಿಸ್ಥಿತಿ, ನಡೆಸಲಾಗುತ್ತಿರುವ ನಿರಂತರ ಸಂಶೋಧನೆಗಳು ಕೃಷಿ ಭೂಮಿಗೆ ಅದರ ವರ್ಗಾವಣೆ, ಸರ್ಕಾರದ ಯೋಜನೆ, ನೀರಿನ ಸಂಸ್ಕರಣೆ, ಮರು ಬಳಕೆ ರೈತ ತರಬೇತಿ‌ ಕಾರ್ಯಕ್ರಮಗಳು ತಂತ್ರಜ್ಞನಗಳ ವರ್ಗಾವಣೆಗಳ ಪ್ರೋತ್ಸಾಹ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಸ್ರೇಲ್ ದೇಶದ ಡೆಪ್ಯೂಟಿ ಕಾನ್ಸಲೇಟ್ ಜನರಲ್ ಲೈಮೋರ್ ಬ್ಲೆಟರ್, ಇಸ್ರೇಲ್ ನಲ್ಲಿರುವ SOLED & DATA PANEL ಕಂಪನಿಯ ಕೋ ಫೌಂಡರ್, ಡಾನ ಪೌಷ್ಟಿ, ಹಾಗೂ CSO, CLIMATE CROP ಕಂಪನಿಯ ಕೋ ಫೌಂಡರ್ ವಿವೇಕಾನಂದ ತಿವಾರಿ, ಇಸ್ರೇಲ್ ದೇಶದ ಕಾನ್ಸಲೇಟ್ ಸಿಬ್ಬಂದಿ ರೇಷ್ಮ, ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಡಾ. ಜಿ.ಟಿ.ಪುತ್ರ, ಅಪರ ನಿರ್ದೇಶಕ ರೆಡ್ಡಿ, ಸಭೆಯಲ್ಲಿ ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago