ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಅಭಿವೃದ್ಧಿಪಡಿಸಿದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಹಾಗೂ ಕೃಷಿ ಪರಿಕರಗಳ ʼಕೃಷಿ ವಿಶ್ವವಿದ್ಯಾನಿಲಯ ಉತ್ಪನ್ನಗಳ ಸಂತೆ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು(ಜೂ.22) ಚಾಲನೆ ನೀಡಿದರು.
ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ ಈ ವಿನೂತನ ಸಂತೆಯಲ್ಲಿ, ಬೆಂಗಳೂರು ಕೃಷಿ ವಿವಿಯ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ ವಿಸ್ತರಣಾ ಹಾಗೂ ಕೃಷಿ ಮಹಾವಿದ್ಯಾಲಯಗಳಲ್ಲಿ ಸಂಶೋಧನೆಗೊಳಪಟ್ಟು ಉತ್ಪಾದಿಸಲಾದ ಕೃಷಿ ಉತ್ಪನ್ನಗಳು ಹಾಗೂ ಕೃಷಿ ತಂತ್ರಜ್ಞಾನಗಳನ್ನು ಪರಿಚಯ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಸಂತೆಯನ್ನು ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂತೆಯಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ದಿ ಸಾಮಾಗ್ರಿಗಳು, ಜೈವಿಕ ಗೊಬ್ಬರಗಳು, ಜೇನು ಕೃಷಿ, ಕೇಕ್ ಪ್ರದರ್ಶನ ಸೇರಿದಂತೆ ಇನ್ನೂ ಮುಂತಾದವುಗಳನ್ನು ಈ ಸಂತೆಯಲ್ಲಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಕೆವಿಕೆ ಉಪ ಕುಲಪತಿ ಸುರೇಶ್, ಸಿಬ್ಬಂದಿ ವರ್ಗ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…