ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ದೆಹಲಿಗೆ ವಾಪಸ್ ಆಗುತ್ತಿರುವ ಖರ್ಗೆ ಅವರು ಅಧಿಕಾರ ಹಂಚಿಕೆ ಕುರಿತು ಕೆಲ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ದಾಖಲೆ ಮಟ್ಟದ ಹುಂಡಿ ಸಂಗ್ರಹ
ಈ ಕುರಿತು ಮಾತನಾಡಿದ ಅವರು, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಸಿಎಂ, ಡಿಸಿಎಂ ಸೇರಿದಂತೆ ನಾಲ್ಕು ಮಂದಿ ನಾಯಕರನ್ನು ಕರೆಸಿ ಎಲ್ಲರೂ ಒಟ್ಟಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಏಕಾಂಗಿಯಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಏನು ಮಾಡಬೇಕೆಂದು ತೀರ್ಮಾನಿಸುತ್ತೇವೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…