ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಲಿಖಿತ ಸೂಚನೆ ನೀಡಿದ್ದಾರೆ.
ಈ ಸಂಬಂಧ ಅಪರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎರಡು ಪ್ರತ್ಯೇಕ ಸೂಚನೆ ನೀಡಿರುವ ಅವರು, ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ ವಾಯುಪಡೆಗೆ ನೀಡಲಾಗಿದ್ದ 452ಎಕರೆ 4½ಗಂಟೆ ಭೂ ಮಂಜೂರಾತಿಯನ್ನು ರಾಜ್ಯ ಸರ್ಕಾರ 2017ರ ಅಕ್ಟೋಬರ್ 09ರಂದು ರದ್ದುಗೊಳಿಸಿದ್ದು, ಇದನ್ನು ಅತ್ಯಗತ್ಯವಾದ ಶ್ವಾಸತಾಣವಾಗಿ ಉಳಿಸಲು ತೀರ್ಮಾನಿಸಲಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ರಾಷ್ಟ್ರೀಯ ಹಿತದ ದೃಷ್ಟಿಯಿಂದ ಭೂಮಂಜೂರಾತಿ ರದ್ದು ಪಡಿಸಿದ ಬಳಿಕವೂ ಭಾರತೀಯ ವಾಯುಪಡೆ ಸದರಿ ಭೂಮಿಯನ್ನು ಬಳಸಲು, ಅರಣ್ಯ (ಸಂರಕ್ಷಣಾ) ಕಾಯ್ದೆ-1980 ರಡಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಪರ್ಯಾಯ ಭೂಮಿ ನೀಡುವಂತೆ ತಿಳಿಸಿದ್ದರೂ ವಾಯುಪಡೆ ನಿಯಮ ಉಲ್ಲಂಘಿಸಿದೆ. ಈ ನಿಟ್ಟಿನಲ್ಲಿ 64ಎ ನೋಟಿಸ್ ನೀಡಿ ಒತ್ತುವರಿ ತೆರವು ಮಾಡಿಸಲು ಸೂಚಿಸಿದ್ದಾರೆ.
ಈ ಜಮೀನಿಗೂ ವಾಯುಪಡೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಈಶ್ವರ ಖಂಡ್ರೆ, ಇನ್ನು ಮುಂದೆ ಸದರಿ ಪ್ರದೇಶದಲ್ಲಿ ಅನಿವಾರ್ಯವಾಗಿ ಯಾವುದೇ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಾಗ ನಿಯಮಾನುಸಾರ ಅರಣ್ಯ ಇಲಾಖೆಯಿಂದ (ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ) ಅನುಮತಿ ಪಡೆಯುವಂತೆ ಸುತ್ತೋಲೆ ಹೊರಡಿಸಲು ಮತ್ತು ಎಲ್ಲ ಇಲಾಖೆಗಳಿಗೂ ಮಾಹಿತಿ ನೀಡಲು ಕ್ರಮ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…