ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಲಿಖಿತ ಸೂಚನೆ ನೀಡಿದ್ದಾರೆ.
ಈ ಸಂಬಂಧ ಅಪರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎರಡು ಪ್ರತ್ಯೇಕ ಸೂಚನೆ ನೀಡಿರುವ ಅವರು, ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ ವಾಯುಪಡೆಗೆ ನೀಡಲಾಗಿದ್ದ 452ಎಕರೆ 4½ಗಂಟೆ ಭೂ ಮಂಜೂರಾತಿಯನ್ನು ರಾಜ್ಯ ಸರ್ಕಾರ 2017ರ ಅಕ್ಟೋಬರ್ 09ರಂದು ರದ್ದುಗೊಳಿಸಿದ್ದು, ಇದನ್ನು ಅತ್ಯಗತ್ಯವಾದ ಶ್ವಾಸತಾಣವಾಗಿ ಉಳಿಸಲು ತೀರ್ಮಾನಿಸಲಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ರಾಷ್ಟ್ರೀಯ ಹಿತದ ದೃಷ್ಟಿಯಿಂದ ಭೂಮಂಜೂರಾತಿ ರದ್ದು ಪಡಿಸಿದ ಬಳಿಕವೂ ಭಾರತೀಯ ವಾಯುಪಡೆ ಸದರಿ ಭೂಮಿಯನ್ನು ಬಳಸಲು, ಅರಣ್ಯ (ಸಂರಕ್ಷಣಾ) ಕಾಯ್ದೆ-1980 ರಡಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಪರ್ಯಾಯ ಭೂಮಿ ನೀಡುವಂತೆ ತಿಳಿಸಿದ್ದರೂ ವಾಯುಪಡೆ ನಿಯಮ ಉಲ್ಲಂಘಿಸಿದೆ. ಈ ನಿಟ್ಟಿನಲ್ಲಿ 64ಎ ನೋಟಿಸ್ ನೀಡಿ ಒತ್ತುವರಿ ತೆರವು ಮಾಡಿಸಲು ಸೂಚಿಸಿದ್ದಾರೆ.
ಈ ಜಮೀನಿಗೂ ವಾಯುಪಡೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಈಶ್ವರ ಖಂಡ್ರೆ, ಇನ್ನು ಮುಂದೆ ಸದರಿ ಪ್ರದೇಶದಲ್ಲಿ ಅನಿವಾರ್ಯವಾಗಿ ಯಾವುದೇ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಾಗ ನಿಯಮಾನುಸಾರ ಅರಣ್ಯ ಇಲಾಖೆಯಿಂದ (ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ) ಅನುಮತಿ ಪಡೆಯುವಂತೆ ಸುತ್ತೋಲೆ ಹೊರಡಿಸಲು ಮತ್ತು ಎಲ್ಲ ಇಲಾಖೆಗಳಿಗೂ ಮಾಹಿತಿ ನೀಡಲು ಕ್ರಮ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…