ರಾಜ್ಯ

ಬೆಂಗಳೂರಲ್ಲಿ ಆರಂಭವಾಗಲಿದೆ ಏರ್‌ ಟ್ಯಾಕ್ಸಿ ಸೇವೆ !

ಬೆಂಗಳೂರು: ಸದ್ಯ ಬೆಂಗಳೂರಿನ ಜನ ನಿತ್ಯ ಟ್ರಾಫಿಕ್‌ ಕಿರಿಕಿರಿಯಿಂದ ಬಳಲುತ್ತಿದ್ದಾರೆ. ಟ್ರಾಫಿಕ್‌ ನಿಂದ ಬಳಲುವವರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮುಂಬರುವ 2026 ಕ್ಕೆ ಎಲೆಕ್ಟ್ರಿಕಲ್‌ ಏರ್‌ ಟ್ಯಾಕ್ಸಿ ಸೇವೆ ಆಂರಭವಾಗಲಿದೆ.

ಹೌದು. ಇಂಡಿಗೋದ ಪ್ರವರ್ತಕ ಸಮೂಹದ ಇಂಟರ್ಗ್ಲೋಬ್‌ ಎಂಟರ್‌ ಪ್ರೈಸಸ್‌ ಸಂಸ್ಥೆ ಏರ್‌ ಟ್ಯಾಕ್ಸಿ ಸೇವೆ ಆರಂಭಿಸಲು ನಿರ್ಧರಿಸಿದೆ. ಅದರಂತೆ ಇಂಟರ್ಗ್ಲೋಬ್‌ ಸಂಸ್ಥೆ ಹಾಗೂ ಅಮೆರಿಕಾದ ಮೂಲಕ ಆರ್ಚರ್‌ ಏವಿಯೇಷನ್‌ ಸಂಸ್ಥೆಗಳು ಬೆಂಗಳೂರಿನಲ್ಲಿ ಮ್ಯಾಪಿಂಗ್‌ ಕಾರ್ಯ ನಡೆಸುತ್ತಿವೆ.

ಮೊದಲ ಹಂತದಲ್ಲಿ ದೆಹಲಿಯಲ್ಲಿ ಏರ್‌ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತಿದ್ದು, ನಂತರ ಸಿಲಿಕಾನ್‌ ಸಿಟಿಗೂ ಸೇವೆ ವಿಸ್ತರಿಸಲಿದೆ. ಸರ್ಜಾಪುರ, ಐಟಿಪಿಎಲ್‌, ಎಲೆಕ್ಟ್ರಾನಿಕ್‌ ಸಿಟಿ ಭಾಗದಲ್ಲಿ ಏರ್‌ ಟ್ಯಾಕ್ಸಿ ನಿಲ್ದಾಣಗಳ ಗುರುತು ಕಾರ್ಯ ನಡೆಸಲಾಗುತ್ತಿದೆ. ಡ್ರೋಣ್‌ ಮಾದರಿಯಲ್ಲಿರುವ ಏರ್‌ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏರ್‌ ಟ್ಯಾಕ್ಸಿ ನಿಲ್ದಾಣ ಹಾಗೂ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಪ್ರದೇಶಗಳ ಗುರುತು ಹಾಕಲಾಗಿದ್ದು, ಏರ್‌ ಪೋರ್ಟ್‌ಗೆ ಏರ್‌ ಟ್ಯಾಕ್ಸಿಯಲ್ಲಿ ತೆರಳುವವರಿಗೆ 2 ಸಾವಿರದಿಂದ 2500 ರೂಪಾಯಿ ದರ ನಿಗದಿಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

32 mins ago

ಮೈಸೂರು| ತೃತೀಯ ಲಿಂಗಿಗೆ ಲೈಂಗಿಕ ಕಿರುಕುಳ, ಅಪಹರಣ ಯತ್ನ ಪ್ರಕರಣ: ಮೂವರ ಬಂಧನ

ಮೈಸೂರು: ನಗರದ ಮೇಟಗಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…

1 hour ago

ಹನೂರು| ಕಾಡಾನೆ ದಾಳಿ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಳ್ಳಿಕಾರ್‌ ಹೋರಿ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…

2 hours ago

ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ 4 ಚೀತಾ

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…

2 hours ago

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ…

3 hours ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

4 hours ago