ರಾಜ್ಯ

ಬೆಂಗಳೂರಲ್ಲಿ ಆರಂಭವಾಗಲಿದೆ ಏರ್‌ ಟ್ಯಾಕ್ಸಿ ಸೇವೆ !

ಬೆಂಗಳೂರು: ಸದ್ಯ ಬೆಂಗಳೂರಿನ ಜನ ನಿತ್ಯ ಟ್ರಾಫಿಕ್‌ ಕಿರಿಕಿರಿಯಿಂದ ಬಳಲುತ್ತಿದ್ದಾರೆ. ಟ್ರಾಫಿಕ್‌ ನಿಂದ ಬಳಲುವವರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮುಂಬರುವ 2026 ಕ್ಕೆ ಎಲೆಕ್ಟ್ರಿಕಲ್‌ ಏರ್‌ ಟ್ಯಾಕ್ಸಿ ಸೇವೆ ಆಂರಭವಾಗಲಿದೆ.

ಹೌದು. ಇಂಡಿಗೋದ ಪ್ರವರ್ತಕ ಸಮೂಹದ ಇಂಟರ್ಗ್ಲೋಬ್‌ ಎಂಟರ್‌ ಪ್ರೈಸಸ್‌ ಸಂಸ್ಥೆ ಏರ್‌ ಟ್ಯಾಕ್ಸಿ ಸೇವೆ ಆರಂಭಿಸಲು ನಿರ್ಧರಿಸಿದೆ. ಅದರಂತೆ ಇಂಟರ್ಗ್ಲೋಬ್‌ ಸಂಸ್ಥೆ ಹಾಗೂ ಅಮೆರಿಕಾದ ಮೂಲಕ ಆರ್ಚರ್‌ ಏವಿಯೇಷನ್‌ ಸಂಸ್ಥೆಗಳು ಬೆಂಗಳೂರಿನಲ್ಲಿ ಮ್ಯಾಪಿಂಗ್‌ ಕಾರ್ಯ ನಡೆಸುತ್ತಿವೆ.

ಮೊದಲ ಹಂತದಲ್ಲಿ ದೆಹಲಿಯಲ್ಲಿ ಏರ್‌ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತಿದ್ದು, ನಂತರ ಸಿಲಿಕಾನ್‌ ಸಿಟಿಗೂ ಸೇವೆ ವಿಸ್ತರಿಸಲಿದೆ. ಸರ್ಜಾಪುರ, ಐಟಿಪಿಎಲ್‌, ಎಲೆಕ್ಟ್ರಾನಿಕ್‌ ಸಿಟಿ ಭಾಗದಲ್ಲಿ ಏರ್‌ ಟ್ಯಾಕ್ಸಿ ನಿಲ್ದಾಣಗಳ ಗುರುತು ಕಾರ್ಯ ನಡೆಸಲಾಗುತ್ತಿದೆ. ಡ್ರೋಣ್‌ ಮಾದರಿಯಲ್ಲಿರುವ ಏರ್‌ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏರ್‌ ಟ್ಯಾಕ್ಸಿ ನಿಲ್ದಾಣ ಹಾಗೂ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಪ್ರದೇಶಗಳ ಗುರುತು ಹಾಕಲಾಗಿದ್ದು, ಏರ್‌ ಪೋರ್ಟ್‌ಗೆ ಏರ್‌ ಟ್ಯಾಕ್ಸಿಯಲ್ಲಿ ತೆರಳುವವರಿಗೆ 2 ಸಾವಿರದಿಂದ 2500 ರೂಪಾಯಿ ದರ ನಿಗದಿಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

56 mins ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

1 hour ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

3 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

3 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

4 hours ago

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

8 hours ago