ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಐಶ್ವರ್ಯಾ ಗೌಡ ಕೇಸ್ನಲ್ಲಿ ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ಅದರಲ್ಲಿ ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಪರಿಚಯ ಎಂದು ಹೇಳಿ ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ಐಶ್ವರ್ಯಾ ಗೌಡ ನಿಖಿಲ್ ಹಾಗೂ ಅನಿತಾ ಅವರನ್ನು ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಪ್ರಕರಣದ ಬಗ್ಗೆ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಎಂಬುದು ಗೊತ್ತಾಗಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದೇನೆ. ಕೇಸ್ನ ಹಿನ್ನೆಲೆ ತಿಳಿದುಕೊಂಡಿದ್ದೇನೆ ಎಂದರು.
ಈ ಪ್ರಕರಣದಲ್ಲಿ ನಿಖಿಲ್ ಹಾಗೂ ಅನಿತಾ ಹೆಸರನ್ನು ಎಳೆದಿದ್ದಾರೆ ಎಂದು ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತದೆ ಎಂದು ಕಿಡಿಕಾರಿದರು.
ಇನ್ನು ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಅವರ ಮುಖಗಳನ್ನೇ ನೋಡಿಲ್ಲ. ಹೇಗೆ ಅವರ ಪರಿಚಯ ಎಂದು ಸುದ್ದಿ ಮಾಡಿಸುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಈ ಪ್ರಕರಣದ ಹಿಂದೆ ಯಾರಿದ್ದಾರೆ? ನಿಖಿಲ್ ಹಾಗೂ ಅನಿತಾರನ್ನು ಯಾಕೆ ಈ ಪ್ರಕರಣದಲ್ಲಿ ತಂದ್ರಿ? ಇದನ್ನು ಸರ್ಕಾರ ಎಂದು ಕರೆಯುತ್ತೀರಾ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…