ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಐಶ್ವರ್ಯಾ ಗೌಡ ಕೇಸ್ನಲ್ಲಿ ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ಅದರಲ್ಲಿ ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಪರಿಚಯ ಎಂದು ಹೇಳಿ ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ಐಶ್ವರ್ಯಾ ಗೌಡ ನಿಖಿಲ್ ಹಾಗೂ ಅನಿತಾ ಅವರನ್ನು ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಪ್ರಕರಣದ ಬಗ್ಗೆ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಎಂಬುದು ಗೊತ್ತಾಗಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದೇನೆ. ಕೇಸ್ನ ಹಿನ್ನೆಲೆ ತಿಳಿದುಕೊಂಡಿದ್ದೇನೆ ಎಂದರು.
ಈ ಪ್ರಕರಣದಲ್ಲಿ ನಿಖಿಲ್ ಹಾಗೂ ಅನಿತಾ ಹೆಸರನ್ನು ಎಳೆದಿದ್ದಾರೆ ಎಂದು ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತದೆ ಎಂದು ಕಿಡಿಕಾರಿದರು.
ಇನ್ನು ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಅವರ ಮುಖಗಳನ್ನೇ ನೋಡಿಲ್ಲ. ಹೇಗೆ ಅವರ ಪರಿಚಯ ಎಂದು ಸುದ್ದಿ ಮಾಡಿಸುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಈ ಪ್ರಕರಣದ ಹಿಂದೆ ಯಾರಿದ್ದಾರೆ? ನಿಖಿಲ್ ಹಾಗೂ ಅನಿತಾರನ್ನು ಯಾಕೆ ಈ ಪ್ರಕರಣದಲ್ಲಿ ತಂದ್ರಿ? ಇದನ್ನು ಸರ್ಕಾರ ಎಂದು ಕರೆಯುತ್ತೀರಾ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…