ರಾಜ್ಯ

ಮಹಿಳೆಯರ ರಕ್ಷಣೆಗೆಂದೇ ಜಾರಿಗೆ ಬರಲಿದೆ ಅಕ್ಕಾ ಪಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ

ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್‌ ಒಳಗೊಂಡ ಅಕ್ಕಾ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಈಗಾಗಲೇ ಬೀದರ್‌ ಜಿಲ್ಲೆಯಲ್ಲಿ ಅಕ್ಕಾ ಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆಗಸ್ಟ್.‌15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

19 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

53 mins ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

4 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

5 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

20 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

23 hours ago