ರಾಜ್ಯ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 4 ಮಂದಿ ಆರೋಪಿಗಳ ಬಂಧನ

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಮನೀಶ್, ಬನ್ನೂರು ಗ್ರಾಮದ ಕೃಷ್ಣನಗರ ನಿವಾಸಿ, ಬಸ್ ಚಾಲಕ ಚೇತನ್, ಪುತ್ತೂರು ಹೊರವಲಯದ ಪಡೀಲು ನಿವಾಸಿ ಕೇಶವ ಪಡೀಲು ಮತ್ತು ಮಂಜುನಾಥ ಯಾನೆ ಮಂಜು ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕಾಗಿ ಅಕ್ಷಯ್ ಕಲ್ಲೇಗ ಅವರನ್ನು ತಂಡವೊಂದು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರೂನಗರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಪುತ್ತೂರಿನ ನೆಹರುನಗರದಲ್ಲಿ ಸೋಮವಾರ ರಾತ್ರಿ ನಡೆದ ಅಪಘಾತಕ್ಕೆ ಸಂಬಂಧಿಸಿ ಅಕ್ಷಯ್ ಕಲ್ಲೇಗ ಹಾಗೂ ಆರೋಪಿಗಳ ಪೈಕಿ ಮನೀಶ್ ಮತ್ತು ಚೇತನ್ ನಡುವೆ ದೂರವಾಣಿ ಕರೆಯ ಮೂಲಕ ಮಾತಿನ ಚಕಮಕಿ ನಡೆದಿತ್ತು. ಈ ಘಟನೆಯ ಬಳಿಕ ಅಕ್ಷಯ್ ಕಲ್ಲೇಗ ತನ್ನ ಸ್ನೇಹಿತ ಚಿಕ್ಕಮುಡ್ನೂರಿನ ವಿಖ್ಯಾತ್ ಎಂಬವರ ಜತೆ ನೆಹರೂ ನಗರದ ಕೆನರಾ ಬ್ಯಾಂಕ್ ಎಟಿಎಂ ಬಳಿ ನಿಂತುಕೊಂಡಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಆರೋಪಿಗಳಾದ ಮನೀಶ್, ಚೇತನ್, ಮಂಜುನಾಥ ಮತ್ತು ಕೇಶವ ಪಡೀಲು ಅವರು ಅಕ್ಷಯ್ ಕಲ್ಲೇಗ ಜೊತೆಗೆ ನಡೆದಿದ್ದ ಮಾತಿನ ಚಕಮಕಿಗೆ ಸಂಬಂಧಿಸಿ ತಕರಾರು ಎತ್ತಿ ತಲವಾರಿನಿಂದ ಕಡಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.

ಅಕ್ಷಯ್ ಮಾಣಿ-ಮೈಸೂರು ಹೆದ್ದಾರಿ ಬದಿಯ ಪೊದೆಯ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಕ್ಷಯ್ ಜತೆಗಿದ್ದ ಅವರ ಸ್ನೇಹಿತ ಚಿಕ್ಕಮುಡ್ನೂರಿನ ವಿಖ್ಯಾತ್ ಈ ಸಂದರ್ಭ ತಪ್ಪಿಸಿಕೊಂಡು ಓಡಿಹೋಗಿ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ವಿಖ್ಯಾತ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳು ಠಾಣೆಗೆ ಶರಣು : ನಾಲ್ವರು ಆರೋಪಿಗಳ ಪೈಕಿ ಪ್ರಮುಖ ಆರೋಪಿಗಳಾದ ಮನೀಶ್ ಮತ್ತು ಚೇತನ್ ಕೊಲೆ ನಡೆಸಿದ ಸ್ಥಳದಿಂದ ನೇರವಾಗಿ ಪುತ್ತೂರು ನಗರ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾಗಿದ್ದರು. ಉಳಿದ ಇಬ್ಬರು ಆರೋಪಿಗಳಾದ ಕೇಶವ ಪಡೀಲು ಮತ್ತು ಮಂಜುನಾಥ ಯಾನೆ ಮಂಜು ಎಂಬವರನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೊಲೆ ನಡೆಸಲಾದ ಸ್ಥಳಕ್ಕೆ ಕರೆತಂದು ಪೊಲೀಸರು ಮಂಗಳವಾರ ಸಂಜೆ ಸ್ಥಳದ ಮಹಜರು ನಡೆಸಿದರು.

ಮೃತರ ಅಂತ್ಯ ಸಂಸ್ಕಾರ ಮನೆಯ ಮುಂಭಾಗದಲ್ಲಿ ಇಂದು ಮಧ್ಯಾಹ್ನ ನಡೆಸಲಾಯಿತು. ಮೃತರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

11 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

13 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

14 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

15 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

17 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

17 hours ago