ರಾಜ್ಯ

ಆಳಂದ ಮತಗಳ್ಳತನ ಕೇಸ್‌ | ತನಿಖೆಗೆ ಸಿಐಡಿ ವಿಶೇಷ ತನಿಖಾ ತಂಡ ರಚಿಸಿದ ಸರ್ಕಾರ

ಬೆಂಗಳೂರು : ಕಲಬುರಗಿಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಬಿಕೆ ಸಿಂಗ್‌ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ.

ಸರ್ಕಾರದ ಆದೇಶ ಹೀಗಿದೆ…
2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ. 2023ರ ಫೆಬ್ರವರಿ 21ರಂದು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 182, 419, 464, 465 ರಂತೆ ಪ್ರಕರಣ (ಮೊಕದ್ದಮೆ ಸಂಖ್ಯೆ: 26/2023) ದಾಖಲಾಗಿದೆ. ಈ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗಬಹುದಾದ ಇತರೇ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರಾದ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನ ರಚಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023ರ ಕಲಂ 2(ಯು) ಅಡಿಯಲ್ಲಿ ತನಿಖಾ ತಂಡಕ್ಕೆ ಪೊಲೀಸ್‌ ಠಾಣಾಧಿಕಾರ ನೀಡಲಾಗಿದೆ. ಈ ಎಸ್‌ಐಟಿ ತಂಡಕ್ಕೆ ಆಳಂದ ಪ್ರಕರಣ ಸೇರಿದಂತೆ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲೂ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳನ್ನು ತನಿಖೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಆದ್ದರಿಂದ ಡಿಜಿ & ಐಜಿಪಿ ಈ ವಿಶೇಷ ತನಿಖಾ ತಂಡಕ್ಕೆ ಅವಶ್ಯಕವಿರುವ ಇತರೇ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಒಸಗಿಸುವಂತೆ ಆದೇಶದಲ್ಲಿ ತಿಳಿಸಿದೆ.

ಅದರಂತೆ ತನಿಖಾ ತಂಡವು ಎಲ್ಲಾ ಆಮಾಯಗಳಲ್ಲಿ ಪ್ರಕರಣಗಳ ಸಮಗ್ರ ತನಿಖೆ ಕೈಗೊಂಡು, ಶೀಘ್ರದಲ್ಲೇ ತನಿಖೆಯನ್ನು ಪೂರ್ಣಗೊಳಿಸಬೇಕು. ಬಳಿಕ ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

36 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

57 mins ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

5 hours ago