ರಾಜ್ಯ

ಆಳಂದ ಮತಗಳ್ಳತನ ಕೇಸ್‌ | ತನಿಖೆಗೆ ಸಿಐಡಿ ವಿಶೇಷ ತನಿಖಾ ತಂಡ ರಚಿಸಿದ ಸರ್ಕಾರ

ಬೆಂಗಳೂರು : ಕಲಬುರಗಿಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಬಿಕೆ ಸಿಂಗ್‌ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ.

ಸರ್ಕಾರದ ಆದೇಶ ಹೀಗಿದೆ…
2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ. 2023ರ ಫೆಬ್ರವರಿ 21ರಂದು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 182, 419, 464, 465 ರಂತೆ ಪ್ರಕರಣ (ಮೊಕದ್ದಮೆ ಸಂಖ್ಯೆ: 26/2023) ದಾಖಲಾಗಿದೆ. ಈ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗಬಹುದಾದ ಇತರೇ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರಾದ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನ ರಚಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023ರ ಕಲಂ 2(ಯು) ಅಡಿಯಲ್ಲಿ ತನಿಖಾ ತಂಡಕ್ಕೆ ಪೊಲೀಸ್‌ ಠಾಣಾಧಿಕಾರ ನೀಡಲಾಗಿದೆ. ಈ ಎಸ್‌ಐಟಿ ತಂಡಕ್ಕೆ ಆಳಂದ ಪ್ರಕರಣ ಸೇರಿದಂತೆ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲೂ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳನ್ನು ತನಿಖೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಆದ್ದರಿಂದ ಡಿಜಿ & ಐಜಿಪಿ ಈ ವಿಶೇಷ ತನಿಖಾ ತಂಡಕ್ಕೆ ಅವಶ್ಯಕವಿರುವ ಇತರೇ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಒಸಗಿಸುವಂತೆ ಆದೇಶದಲ್ಲಿ ತಿಳಿಸಿದೆ.

ಅದರಂತೆ ತನಿಖಾ ತಂಡವು ಎಲ್ಲಾ ಆಮಾಯಗಳಲ್ಲಿ ಪ್ರಕರಣಗಳ ಸಮಗ್ರ ತನಿಖೆ ಕೈಗೊಂಡು, ಶೀಘ್ರದಲ್ಲೇ ತನಿಖೆಯನ್ನು ಪೂರ್ಣಗೊಳಿಸಬೇಕು. ಬಳಿಕ ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago