ರಾಜ್ಯ

ಆಳಂದ ಮತಗಳ್ಳತನ ಕೇಸ್‌ | ತನಿಖೆಗೆ ಸಿಐಡಿ ವಿಶೇಷ ತನಿಖಾ ತಂಡ ರಚಿಸಿದ ಸರ್ಕಾರ

ಬೆಂಗಳೂರು : ಕಲಬುರಗಿಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಬಿಕೆ ಸಿಂಗ್‌ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ.

ಸರ್ಕಾರದ ಆದೇಶ ಹೀಗಿದೆ…
2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ. 2023ರ ಫೆಬ್ರವರಿ 21ರಂದು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 182, 419, 464, 465 ರಂತೆ ಪ್ರಕರಣ (ಮೊಕದ್ದಮೆ ಸಂಖ್ಯೆ: 26/2023) ದಾಖಲಾಗಿದೆ. ಈ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗಬಹುದಾದ ಇತರೇ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರಾದ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನ ರಚಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023ರ ಕಲಂ 2(ಯು) ಅಡಿಯಲ್ಲಿ ತನಿಖಾ ತಂಡಕ್ಕೆ ಪೊಲೀಸ್‌ ಠಾಣಾಧಿಕಾರ ನೀಡಲಾಗಿದೆ. ಈ ಎಸ್‌ಐಟಿ ತಂಡಕ್ಕೆ ಆಳಂದ ಪ್ರಕರಣ ಸೇರಿದಂತೆ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲೂ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳನ್ನು ತನಿಖೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಆದ್ದರಿಂದ ಡಿಜಿ & ಐಜಿಪಿ ಈ ವಿಶೇಷ ತನಿಖಾ ತಂಡಕ್ಕೆ ಅವಶ್ಯಕವಿರುವ ಇತರೇ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಒಸಗಿಸುವಂತೆ ಆದೇಶದಲ್ಲಿ ತಿಳಿಸಿದೆ.

ಅದರಂತೆ ತನಿಖಾ ತಂಡವು ಎಲ್ಲಾ ಆಮಾಯಗಳಲ್ಲಿ ಪ್ರಕರಣಗಳ ಸಮಗ್ರ ತನಿಖೆ ಕೈಗೊಂಡು, ಶೀಘ್ರದಲ್ಲೇ ತನಿಖೆಯನ್ನು ಪೂರ್ಣಗೊಳಿಸಬೇಕು. ಬಳಿಕ ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

2 mins ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

23 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

1 hour ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago